LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ದರ್ಶನ್ ಒಳಿತಿಗಾಗಿ ಸಹೋದರಿಯ ಪತಿ ಶನೇಶ್ವರ, ರಾಮಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕಾರವಾರ (ಉತ್ತರ ಕನ್ನಡ): ನಟ ದರ್ಶನ್ ಒಳಿತಿಗಾಗಿ ಅವರ ಸಹೋದರಿಯ ಪತಿ ಕಾರವಾರದ ಕೈಗಾದಲ್ಲಿರುವ ಶನೇಶ್ವರ, ರಾಮಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾರವಾರ ತಾಲೂಕಿನ ಕೈಗಾದಲ್ಲಿ ಉದ್ಯೋಗಿಯಾಗಿರುವ ದರ್ಶನ್ ಅವರ ಭಾವ ಮಂಜುನಾಥ ಅವರು ನಟ ಸಂಕಷ್ಟದಿಂದ ಹೊರ ಬರುವಂತಾಗಲಿ, ಪ್ರಕರಣದಿಂದ ಮುಕ್ತರಾಗಬೇಕು ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.


ಕೈಗಾ ವಸತಿ ಸಂಕೀರ್ಣದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಸಲ್ಲಿಸಿದ ಅವರು ಪ್ರಕರಣದಿಂದ ಬೇಗ ಮುಕ್ತರಾಗಿ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.


 ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಪಟ್ಟಿಯಲ್ಲಿರುವ ನಟ ದರ್ಶನ್ ಈಗಾಗಲೇ ಅರೆಸ್ಟ್ ಆಗಿದ್ದಾರೆ. ಬಂಧಿತರ ಸಂಖ್ಯೆ 18ಕ್ಕೇರಿದೆ. ದರ್ಶನ್ ಮತ್ತು ಪವಿತ್ರಾಗೌಡ ಸೇರಿ 13 ಆರೋಪಿಗಳನ್ನು 6 ದಿನಗಳ ಕಾಲ ನಗರದ 24ನೇ ಎಸಿಎಂಎಂ ನ್ಯಾಯಾಲಯ ಪೊಲೀಸರ ವಶಕ್ಕೆ ನೀಡಿ ಆದೇಶಿಸಿತ್ತು. ಭಾಗಶಃ ವಿಚಾರಣೆ ಪೂರ್ಣಗೊಳಿಸಿರುವ ಪೊಲೀಸರು ಇಂದು ಮಧ್ಯಾಹ್ನ ದರ್ಶನ್​ ಸೇರಿ ಆರೋಪಿಗಳನ್ನು ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆಗಳಿವೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕಮಿಷನರ್​ ಬಿ. ದಯಾನಂದ್ ಭೇಟಿ ನೀಡಿ, ಮಾಹಿತಿ ಪಡೆದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್