LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶ್ರೀ ವಾಸವಿ ವಿದ್ಯಾಲಯ ಎಸ್.ಎಸ್.ಎಲ್.ಸಿ ಫಲಿತಾಂಶ ಅತ್ಯುತ್ತಮ ಸಾಧನೆ 

ಬಳ್ಳಾರಿ, ಏ. 24: ನಗರದ ಖ್ಯಾತ ಶಿಕ್ಷಣ ಸಂಸ್ಥೆಯಾದ ಶ್ರೀ ವಾಸವಿ ವಿದ್ಯಾಲಯದ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಈ ಬಾರಿ ಶಾಲೆಯ ಒಟ್ಟು ಫಲಿತಾಂಶ ಶೇಕಡಾ 99% ಆಗಿದ್ದು, ಶಾಲೆಯ ವಿದ್ಯಾರ್ಥಿನಿ
ಲಾವಣ್ಯ .ಎಂ 613 (98%), ಅನುಷಾ.ಬಿ 576(92%), ರೋಷನ್ ಕುಮಾರ್ 572 (91%), ಮೀಸ್ಮಾ ಕೌಸರ್ 562 (89%), ಮದಿಹಾ ಅಂಜುಮ್ 559 (89%) ಅಂಕಗಳು ಗಳಿಸಿರುವುದರ ಮೂಲಕ ಶಾಲೆಗೆ
ಕೀರ್ತಿ ತಂದಿದ್ದಾರೆ. 55% ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ಪ್ರಥಮ ದರ್ಜೆಯಲ್ಲಿ, 45% ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದು ಶಾಲೆಗೆ ಹೆಮ್ಮೆಯನ್ನು ತಂದಿದ್ದಾರೆ.
ಈ ಸಾಧನೆಗೆ ವಿದ್ಯಾರ್ಥಿಗಳ ಕಟ್ಟುನಿಟ್ಟಾದ ಪರಿಶ್ರಮ, ನಿರಂತರ ಅಭ್ಯಾಸ ಮತ್ತು ಗುರಿ
ಸಾಧಿಸುವ ಮನೋಭಾವ ಮುಖ್ಯ ಕಾರಣವಾಗಿದೆ. ಶಿಕ್ಷಕರ ಸಮರ್ಪಿತ ಬೋಧನೆ, ಸೂಕ್ತಮರ್ಗದರ್ಶನ ಹಾಗೂ ಪೋಷಕರ ಪ್ರೋತ್ಸಾಹ ಮತ್ತು ಸಹಕಾರವು ವಿದ್ಯಾರ್ಥಿಗಳ ಯಶಸ್ಸಿಗೆ ಬಲವಾದ ಆಧಾರವಾಗಿದೆ ಎಂದು ಶ್ರೀ ವಾಸವಿ ಎಜುಕೇಷನ್ ಟ್ರಸ್ಟ್ ನ ಕಾರ್ಯದರ್ಶಿ ಗಳಾದ ಪಿ.ಎನ್. ಸುರೇಶ್ ರವರು ಸಂತೋಷ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ಶಾಲೆಯ ಮುಖ್ಯೋಪಾಧ್ಯಾಯರಾದ ವೀರೇಶ್ , ಯು ಮಾತನಾಡಿ,   ವಿದ್ಯಾರ್ಥಿಗಳ ಶ್ರಮ,
ಶಿಕ್ಷಕರು ಹಾಗೂ ಪೋಷಕರ ಬೆಂಬಲದಿಂದ ಈ ಉತ್ತಮ ಫಲಿತಾಂಶ ಸಾಧ್ಯವಾಗಿದೆ ಎಂದು
 ಹರ್ಷವನ್ನು  ವ್ಯಕ್ತಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್