LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ನಾಳೆ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ!

ಬೆಂಗಳೂರು08: ನಾಳೆ(ಗುರುವಾರ) ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಬೆಳಗ್ಗೆ 10.30 ರಿಂದ ಅಂತರ್ಜಾಲದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ‌.


ಮಾರ್ಚ್/ಏಪ್ರಿಲ್ 2024ರ ಎಸ್​ಎಸ್​ಎಲ್​ಸಿ ಪರೀಕ್ಷೆ-1ನ್ನು 25.03.2024 ರಿಂದ 06.04.2024ರ ವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ (09.05.2024) ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.


ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ https://karresults.nic.in ಜಾಲತಾಣದಲ್ಲಿ ಗುರುವಾರ ಬೆಳಗ್ಗೆ 10.30 ಗಂಟೆಯ ನಂತರ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.


ಇದೇ ಸಂದರ್ಭದಲ್ಲಿ ಪರೀಕ್ಷೆ-2ರ ವಿವರ ಇತ್ಯಾದಿಗಳ ಮಾಹಿತಿಯನ್ನು ಕೂಡ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.


ಇನ್ನು, ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್