LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯಮಟ್ಟದ 79 ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಪೂರ್ಣ; ಮೊದಲ ಬಾರಿಗೆ ನಾಗರಿಕರಿಗೆ ಬಾರಿಗೆ 'ಇ-ಪಾಸ್' ವ್ಯವಸ್ಥೆ

ಬೆಂಗಳೂರು: ನಗರದ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ 79 ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರಿಗೆ ಇದೇ ಮೊದಲ ಬಾರಿಗೆ 'ಇ-ಪಾಸ್' ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಆಸಕ್ತರು ಸೇವಾಸಿಂಧು ವೆಬ್‌ಸೈಟ್ www.sevasindhu.karnataka.gov. in ಮೂಲಕ ಆಧಾರ್‌ಹಾಗೂ ಮೊಬೈಲ್ ಫೋನ್ ಸಂಖ್ಯೆಯನ್ನು ನಮೂದಿಸಿ ಒಟಿಪಿ ಮೂಲಕ ಇ-ಪಾಸ್ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದ್ದಾರೆ.

ಇ-ಪಾಸ್‌ನೊಂದಿಗೆ ಮೂಲ ಗುರುತಿನ ಚೀಟಿ ಕಡ್ಡಾಯವಾಗಿ ಹೊಂದಿರಬೇಕು. ಬೆಳಗ್ಗೆ 8.15ರ ಒಳಗೆ ಗೇಟ್ ಸಂಖ್ಯೆ 4ರಿಂದ ಮಾತ್ರ ಮೈದಾನವನ್ನು ಪ್ರವೇಶಿಸಬೇಕು. ನಿಗದಿತ ಸಮಯದ ನಂತರ ಇ-ಪಾಸ್ ಅಮಾನ್ಯವಾಗುತ್ತದೆ.

ಇ-ಪಾಸ್‌ ವರ್ಗಾಯಿಸುವಂತಿಲ್ಲ. ಒಂದು ಇಪಾಸ್‌ಗೆ ಒಬ್ಬರಿಗೆ ಮಾತ್ರ ಪ್ರವೇಶ. ಕಾರ್ಯಕ್ರಮದ ಸಂದರ್ಭದಲ್ಲಿ ಇ-ಪಾಸ್‌ನ ಮುದ್ರಿತ ಪ್ರತಿ ಅಥವಾಡಿಜಿಟಲ್ (ಮೊಬೈಲ್) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಆರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇ-ಪಾಸ್ ಬೇಕಾಗುವುದಿಲ್ಲ.

3 ಸಾವಿರ ಇ-ಪಾಸ್‌ಗಳನ್ನು ಮೊದಲು ಬಂದವರಿಗೆ ಮೊದಲ ಆದ್ಯತೆ ಮೇಲೆ ವಿತರಿಸಲಾಗುತ್ತದೆ. ಇ ಪಾಸ್ ನವರಿಗೆ ಮೈದಾನದೊಳಗೆ ಪಾರ್ಕಿಂಗ್ ಸೌಲಭ್ಯ ಒದಗಿಸಲಾಗುವುದಿಲ್ಲ. ಪೊಲೀಸ್ ಇಲಾಖೆಯ ನಿರ್ದೇಶನದಂತೆ ಸಾರ್ವಜನಿಕರು ತಮ್ಮ ವಾಹನಗಳನ್ನು ನಿಲುಗಡೆ ಮಾಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್