LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜನಮನ ರಂಜಿಸಿದ ರಾಜ್ಯಮಟ್ಟದ ಕಬ್ಬಡ್ಡಿ ಪಂದ್ಯಾವಳಿ



ತಾಳಿಕೋಟೆ,ಜು,೨೦ : ತಾಳಿಕೋಟೆಯ ಶ್ರೀ ಗ್ರಾಮದೇವತೆ(ದ್ಯಾಮವ್ವ)ಯ ಭವ್ಯ ಜಾತ್ರಾಮಹೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಕಬ್ಬಡ್ಡಿ ಪಂದ್ಯಾವಳಿಯು ಕ್ರೀಡಾಭಿಮಾನಿಗಳನ್ನು ರೋಮಾಂಚನಗೊಳಿಸುವ ಮೂಲಕ ಅತ್ಯಂತ ಯಶಸ್ವಿಯಾಗಿ ಸಂಗಮೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಚ್.ಎಸ್ ಪಾಟೀಲ ಹಾಗೂ ಜಾತ್ರೋತ್ಸವದ ಬಾಪುಗೌಡ ಪಾಟೀಲ ಸರ್ವಜ್ಞ ವಿದ್ಯಾಪೀಠ ಶಾಲಾ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಮಂಗಳೂರ, ಸಚೀನ ಪಾಟೀಲ ಅವರು ಪಂದ್ಯಾವಳಿಗೆ ಚಾಲನೆ ನೀಡಿದರು.   
     ರವಿವಾರರಂದು ಬೆಳಿಗ್ಗೆ ೧೨ ಘಂಟೆಗೆ ಪಾರಂಭವಾದ ಈ ಕಬ್ಬಡ್ಡಿ ಪಂದ್ಯಾವಳಿಯು ಜಾತ್ರಾ ಮಹೋತ್ಸವ ಸಮೀತಿ ಹಾಗೂ ಯುವಕ ಮಂಡಳಿಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಈ ಕ್ರೀಡಾಕೂಟವು ಸುತ್ತಮುತ್ತಲಿನ ಸಾವಿರಾರು ಜನತೆಯನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಯಿತು.
   ಪ್ರಥಮ ಬಹುಮಾನವಾಗಿ ೩೦ ಸಾವಿರ ರೂ., ದ್ವಿತೀಯ ಬಹುಮಾನವಾಗಿ ೨೦ ಸಾವಿರ ರೂ. ತೃತೀಯ ಬಹುಮಾನವಾಗಿ ೧೫ ಸಾವಿರ ರೂ. ನಾಲ್ಕನೇ ಬಹುಮಾನವಾಗಿ ೧೦ ಸಾವಿರ ರೂ. ನಗದು ಬಹುಮಾನ ಆಯೋಜಿಸಲಾಗಿದೆ. 

ಭರ್ಜರಿ ಆರಂಭ ತೀರ್ವ ಪೈಪೋಟಿ: ರಾಜ್ಯದ ವಿವಿದ ಮೂಲೆಗಳಿಂದ ಆಗಮಿಸಿದ ಸುಮಾರು  ೨೦ ಕ್ಕೂ ಹೆಚ್ಚು ಖ್ಯಾತ ಕಬ್ಬಡ್ಡಿ ತಂಡಗಳು ಈ ಪಂದ್ಯಾವ:ಳಿಯಲ್ಲಿ ಭಾಗವಹಿಸಿದ್ದವು. ಪ್ರತಿಯೊಂದು ಪಂದ್ಯದಲ್ಲೂ ಆಟಗಾರರು ಪ್ರದರ್ಸಿಸಿದ ಚುರುಕುತನ, ಬಲಿಷ್ಠ ಹಿಡಿv, ಚಾಣಾಕ್ಷ ದಾಳಿಗಳುಪ್ರೇಕ್ಷಕರ ಮೈ ರೋಮಾಂಚನಗೊಳಿಸಿದವು. ಚೆಪ್ಪಾಳೆಗಳ ಮೂಲಕ ಆಟಗಾರರನ್ನು ಹುರಿದುಂಬಿಸಿದರು.

ಶಿಸ್ತುಭದ್ದ ಆಯೋಜನೆ: ಶ್ರೀ ಗ್ರಾಮದೇವತೆ ಜಾತ್ರಾಮಹೋತ್ಸವದ ಅಂಗವಾಗಿ ಆಗಮಿಸಿದ ಕ್ರೀಡಾಪಟುಗಳಿಗೆ ಆಹಾರದ ವ್ಯವಸ್ಥೆ ಹಾಗೂ ಪ್ರಥಮ ಚಿಕಿತ್ಸೆಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು.

ರೋಮಾಂಚಕ ಪಂದ್ಯ: ಅಂತಿಮ ಹಣಾಹಣಿಕಯಲ್ಲಿ ಕಡೆಯ ಕ್ಷಣದ ವರೆಗೂ ಉಭಯ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಅತ್ತುತ್ತಮ ತಂತ್ರಗಾರಿಕೆ ಪ್ರದರ್ಶಿಸಿದ ತಂಡಕ್ಕೆ ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿಯನ್ನು ನೀಡಲಾಗುತ್ತದೆ ಎಂದು ಜಾತ್ರಾ ಕಮೀಟಿ ತಿಳಿಸಿದೆ.
    ಒಟ್ಟಾರೆಯಾಗಿ ಭಾರತದ ಗ್ರಾಮೀಣ ಭಾಗದ ದೇಸೀ ಕ್ರೀಡೆಯಾಗಿರುವ ಕಬ್ಬಡ್ಡಿ ಪಂದ್ಯಾವಳಿ ಕ್ರೀಡಾಸ್ಪೂರ್ತಿಯನ್ನು ಹೆಚ್ಚಿಸುವದರೊಂದಿಗೆ ಜನಮನ ರಂಜಿಸುವದರೊಂದಿಗೆ ಶ್ರೀ ಗ್ರಾಮದೇವತೆ ಜಾತ್ರಾಮಹೋತ್ಸವದ ಸ್ಮರಣೀಯ ಕ್ಷಣವಾಯಿತು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್