LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಯೋಗ ಒತ್ತಡ ನಿರ್ವಹಣೆಗೆ ಸಹಕಾರಿ: ಪ್ರೊ.ತಿಪ್ಪೇರುದ್ರಪ್ಪ

ಬಳ್ಳಾರಿ,ಜ.22- ಯೋಗವು ಮನಸ್ಸು, ದೇಹ ಮತ್ತು ಆತ್ಮವನ್ನು ಸಂಯೋಜಿಸುವ ಮೂಲಕ ಒತ್ತಡದ ಜೀವನವನ್ನು ನಿರ್ವಹಿಸಲು ಹಾಗೂ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ತಿಪ್ಪೇರುದ್ರಪ್ಪ ಅವರು ಹೇಳಿದರು.
ವಿವಿಯ ಯೋಗ ಕೇಂದ್ರದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವಾರದಲ್ಲಿ ಮೂರು ದಿನಗಳ ‘ಯೋಗ, ಪ್ರಾಣಾಯಾಮ ಮತ್ತು ಧ್ಯಾನ ತರಗತಿಗಳ’ ಕಾರ್ಯಕ್ರಮ ಪತಂಜಲಿ ಮಹರ್ಷಿಯವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಯೋಗವನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವುದರಿಂದ ಗುರಿ ಸಾಧನೆಗೆ ಸಹಾಯವಾಗುತ್ತದೆ. ಅರೋಗ್ಯಕರ ಜೀವನಶೈಲಿಯನ್ನು ರೂಢಿಸುತ್ತದೆ. ಯೋಗ ಕಾರ್ಯಕ್ರಮದಲ್ಲಿ ಎಲ್ಲ ಸಿಬ್ಬಂದಿ ಭಾಗವಹಿಸಿ ಎಂದರು.
ವಿವಿಯ ಯೋಗ ಅಧ್ಯಯನ ವಿಭಾಗದ ಉಪನ್ಯಾಸಕ ಡಿ.ಮಹೇಶ ಬಾಬು ಅವರು ಯೋಗದ ಮಹತ್ವದ ಕುರಿತು ಮಾತನಾಡಿದÀರು.
ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತç ವಿಭಾಗದ ಡೀನ್ ಪ್ರೊ.ಸದ್ಯೋಜಾತಪ್ಪ, ಶಿಕ್ಷಣ ನಿಕಾಯದ ಡೀನ್ ಪ್ರೊ.ಸಾಹೇಬ್‌ಅಲಿ ನಿರಗುಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಡಾ.ಶಶಿಧರ ಕೆಲ್ಲೂರ ಗಣ್ಯರನ್ನು ಸ್ವಾಗತಿಸಿ, ನಿರೂಪಿಸಿದರು. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಭ್ಯಾಸ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್