LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಒಳ್ಳೆಯ ನಡತೆ ಮತ್ತು ಹೊಸ ವಿಚಾರಗಳಲ್ಲಿ ಭಾಗಿಯಾಗಿ : ಗುಡಗುಂಟಿಮಠ ಕೆಎಲ್‌ಇ ಪಾಲಿಟೆಕ್ನಿಕ್ ನಲ್ಲಿ ಸೃಜನೋತ್ಸವ ೨೦೨೬ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಲಹೆ

ಮಹಾಲಿಂಗಪುರ: ವಿದ್ಯಾರ್ಥಿಗಳು ಸರಿಯಾದ ಮಾರ್ಗದಲ್ಲಿ ನಡೆದು ಒಳ್ಳೆಯ ಮತ್ತು ಹೊಸ ವಿಚಾರಗಳಲ್ಲಿ ಭಾಗಿಯಾಗಬೇಕು ಎಂದು ಸಿದ್ದಾಪುರದ ಶ್ರೀ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಕಾರ್ಯನಿರ್ವಾಹಕ ನಿರ್ದೇಶಕ ವಿರೂಪಾಕ್ಷಯ್ಯ ಗುಡಗುಂಟಿಮಠ ಹೇಳಿದರು.
ಸ್ಥಳೀಯ ಕೆಎಲ್‌ಇ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಸೃಜನೋತ್ಸವ ೨೦೨೬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಗುರಿ,ಕಲಿಕೆ,ಧೈರ್ಯ ಈ ಮೂರು ವಿಚಾರಗಳನ್ನು ಎಂದಿಗೂ ಮರೆಯಬಾರದು. ಜೊತೆಗೆ ಪಾಲಕರು ಮಕ್ಕಳ ಸೃಜನಶೀಲತೆಗೆ ಕೈಜೋಡಿಸಬೇಕು. ತಾವು ಮಾಡುವ ಕೆಲಸದಲ್ಲಿ ಮನಸ್ಸನ್ನು ತೊಡಗಿಸಿ ಕಾರ್ಯನಿರ್ವಹಿಸಿದರೆ ಗೆಲವು ಸಾಧ್ಯ ಎಂದರು.
ಜಮಖಂಡಿಯ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಪ್ಪ ಪಟ್ಟಿಹಾಳ ಮಾತನಾಡಿ, ಇಂದಿನ ಯುವ ಪೀಳಿಗೆ ನಮ್ಮ ದೇಶ,ರಾಜ್ಯ,ಜಿಲ್ಲಾಧ್ಯಂತ ಹೊಸ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳಬೇಕು. ಸಾಮಾಜಿಕ ಕಾರ್ಯದಲ್ಲಿ ತೊಡಗಿ ಗುರುಗಳಿಗೆ, ತಂದೆ-ತಾಯಂದಿರಿಗೆ ಒಳ್ಳೆಯ ಮಕ್ಕಳು ಎಂದೆನಿಸಿಕೊಳ್ಳಬೇಕು ಎಂದರು.
ಕೆಎಲ್‌ಇ ಪದವಿ ಕಾಲೇಜಿನ ಪ್ರಾಚಾರ್ಯ ಎನ್ ಬಿ ಪಾಟೀಲ್ ಮಾತನಾಡಿ, ಜೀವನದಲ್ಲಿ ನಿರಂತರ ಪ್ರಯತ್ನದಿಂದ ಕೆಲಸ ಮಾಡಿ ಮಾಲೀಕರಾಗಿ. ಯಾವುದೇ ಕೆಲಸಕ್ಕೆ ಹಿಂಜರಿಕೆ ಬೇಡ. ಮೊದಲು ಅರಿತು, ಕಲಿತು ಧೈರ್ಯದಿಂದ ಮುನ್ನುಗ್ಗಿ ಎಂದರು.
ನಂತರ ಜಮಖಂಡಿಯ ಓಲೆಮಠದ ಪ.ಪೂ ಶ್ರೀ ಆನಂದ ದೇವರು ದಿವ್ಯ ಸಾನಿಧ್ಯವಹಿಸಿ ವಿದ್ಯಾರ್ಥಿಗಳ ಜೀವನ ಮಾರ್ಗ ಯಶಸ್ವಿಯಾಗಲಿ ಎಂದು ಹಾರೈಸಿದರು. ಕೆ ಎಲ್ ಇ ಪಾಲಿಟೆಕ್ನಿಕ್ ನ ಪ್ರಾಚಾರ್ಯ ಎಸ್ ಐ ಕುಂದಗೋಳ ವಾರ್ಷಿಕ ವರದಿ ವಾಚಿಸಿ,ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳಾದ ರೋಹಿಣಿ ರಾವಳ, ಪ್ರಜ್ಞಾ ಬೆಳಗಾಂವಕರ, ಬಸವರಾಜ ತೇಲಿ, ಶಿವಾನಂದ ಮಲಾಬದಿ ಅನಿಸಿಕೆ ಹಂಚಿಕೊಂಡರು. ಈ ವ? ಬೀಳ್ಕೊಡುವ ಎಲ್ಲ ವಿದ್ಯಾರ್ಥಿಗಳಿಗೆ ಕಾಲೇಜಿನಿಂದ ಫೈಲ್ ವಿತರಿಸಲಾಯಿತು. ಅನೇಕ ವಿದ್ಯಾರ್ಥಿಗಳು ಉತ್ತಮ ಬಹುಮಾನವನ್ನು ಪಡೆದರು. ಹಾಡಿನ ಜೊತೆಗೆ ಕುಣಿದು ಕುಪ್ಪಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಯ ನಿರ್ದೇಶಕ ಅಶೋಕ ಅಂಗಡಿ, ಉಮೇಶ ಹಾದಿಮನಿ, ವಂದನಾ ಪಸಾರ ಸೇರಿದಂತೆ ವಿವಿಧ ವಿಭಾಗದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳಿದ್ದರು. ಶಿಕ್ಷಕರಾದ ಸವಿತಾ ಬೀಳಗಿ, ವಿಶಾಲ ಮೆಟಗುಡ್ ನಿರೂಪಿಸಿ,ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್