LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿದ್ಥಾರ್ಥಿಗಳು ಪ್ರಶ್ನೆ ಮಾಡುವುದನ್ನು ಕಲಿಯಿರಿ : ಹೊನ್ನೂರು ವಲಿ







ಬಳ್ಳಾರಿ,ಜ.21.: ನಗರದ ಸರಳಾದೇವಿ ಪ್ರಥಮ ದರ್ಜೆ ಕಾಲೇಜಿನಲ್ಲಿ (ಸ್ವಾಯತ್ತ) ಜ.೨೪ರಂದು ಬೆಂಗಳೂರಿನಲ್ಲಿ ಜನಪರ ಶಿಕ್ಷಣ ನೀತಿಗಾಗಿ ಒತ್ತಾಯಿಸಿ ನಡೆಯುತ್ತಿರುವ ಅಖಿಲ ಭಾರತ ಜನ ಸಂಸತ್ತು ಅಂಗವಾಗಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯಿಂದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಅರ್ಥಶಾಸ್ತçದ ವಿಭಾಗದ ಮುಖ್ಯಸ್ಥ ಹೊನ್ನೂರು ವಲಿ ಮಾತನಾಡುತ್ತಾ “ವಿದ್ಯಾರ್ಥಿಗಳು ಪ್ರಶ್ನೆ ಮಾಡುವುದನ್ನು ಕಲಿಯಬೇಕು. ಅಂಧವಾಗಿ ಯಾರನ್ನೂ ಅನುಕರಿಸಬಾರದು. ಶಿಕ್ಷಣ ನೀತಿ ರೂಪಿಸುವಾಗ ಶಿಕ್ಷಣಕ್ಕೆ ಸಂಬAಧಪಟ್ಟವರ ಅಭಿಪ್ರಾಯ ಪಡೆಯುವುದು ಅತ್ಯಾವಶ್ಯಕ” ಎಂದರು.

ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ಸಂಚಾಲಕರಾದ ಸೋಮಶೇಖರ ಗೌಡ ಮಾತನಾಡುತ್ತಾ “ಕೇಂದ್ರ ಬಿಜೆಪಿ ಸರ್ಕಾರ ರಾಷ್ಟಿçÃಯ ಶಿಕ್ಷಣ ನೀತಿ ೨೦೨೦ (ಎನ್.ಇ.ಪಿ) ಜಾರಿಗೊಳಿಸಿದ ನಂತರ ದೇಶವ್ಯಾಪಿ ಈ ಶಿಕ್ಷಣ ವಿರೋಧಿ ನೀತಿಯ ವಿರುದ್ಧ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಲಾಯಿತು. ಮನವಿಗಳನ್ನು ಸಲ್ಲಿಸಲಾಯಿತು. ಇದಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ, ಎನ್.ಇ.ಪಿಗೆ ಪರ್ಯಾಯವಾಗಿ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಿ ಜಾರಿಗೆ ತಂದಿತು. ಆದರೆ ವಿಪರ್ಯಾಸವೆಂದರೆ, ರಾಜ್ಯ ಸರ್ಕಾರ ರಾಷ್ಟಿçÃಯ ಶಿಕ್ಷಣ ನೀತಿಯ ಭಾಗವಾದ, ಸರ್ಕಾರಿ ಶಾಲೆಗಳನ್ನು ಮುಚ್ಚುವ, ಕೆ.ಪಿ.ಎಸ್ ಮ್ಯಾಗ್ನೆಟ್ ಯೋಜನೆಯನ್ನು ಜಾರಿಗೆ ತಂದಿದೆ. ಇದು ಅತ್ಯಂತ  ನೋವಿನ ವಿಚಾರ. ಜನವರಿ ೨೪ರಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಜನ ಸಂಸತ್ತು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ” ಕರೆ ನೀಡಿದರು.

ಪ್ರಾಸ್ತಾವಿಕ ಪ್ರಾಧ್ಯಾಪಕ ಹುಚ್ಚುಸಾಬ್ ಮಾತನಾಡುತ್ತಾ, ಅಖಿಲ ಭಾರತ ಶಿಕ್ಷಣ ಸಮಿತಿಯು ಜನತೆಯ ಸಂಸತ್ತು ಸಂಘಟಿಸಿ, ಶಿಕ್ಷಣದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸರ್ಕಾರಕ್ಕೆ ಪರ್ಯಾಯ ಶಿಕ್ಷಣದ ನೀತಿಯ ಕರಡನ್ನು ಸಲ್ಲಿಸುತ್ತಿರುವ ಅತ್ಯಂತ ಸಮಂಜಸ ಹಾಗೂ ಶ್ಲಾಘನೀಯ ಕ್ರಮ” ಎಂದರು.

ಉಪನ್ಯಾಸಕ ದುರ್ಗಪ್ಪ ಮಾತನಾಡುತ್ತಾ, “ಸರ್ಕಾರಿ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರ ಬದಲಿಗೆ ದೊಡ್ಡ ಸಂಖ್ಯೆಯಲ್ಲಿ ಅತಿಥಿ ಉಪನ್ಯಾಸಕರು ಇರುವುದು ಶಿಕ್ಷಣದ ಪರಿಸ್ಥಿತಿಯನ್ನು ಸೂಚಿಸುತ್ತದೆ” ಎಂದರು.

ಈ ಸಂದರ್ಭದಲ್ಲಿ ಬೋಧಕ ಮತ್ತು ಬೋಧಕೇತರರ ಸಿಬ್ಬಂದಿ ಮತ್ತಿತರರು ಇದ್ದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್