LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳಕ್ಕೆ ಎಸ್.ಯು.ಸಿ.ಐ ಖಂಡನೆ

ಬಳ್ಳಾರಿ, ಮೇ.18: ಎಸ್.ಯು.ಸಿ.ಐ (ಸಿ) ಪಕ್ಷದ ವತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವನ್ನು ವಿರೋಧಿಸಿ ಕುರುಗೋಡು ಪಟ್ಟಣದಲ್ಲಿಂದು ಪ್ರತಿಭಟನೆ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು 
ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಲೀಟರಿಗೆ ತಲಾ ರೂ. 3ರಂತೆ ಏರಿಸಿರುವ ಕ್ರಮವನ್ನು ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷವು ತೀವ್ರವಾಗಿ ಖಂಡಿಸುತ್ತದೆ. 
ಇಂಧನ ಬೆಲೆ ಏರಿಕೆಯು ಬೇರೆಲ್ಲ ಅವಶ್ಯಕ ವಸ್ತುಗಳನ್ನು ದುಬಾರಿಗೊಳಿಸಿ, ಹಣದುಬ್ಬರಕ್ಕೆ ಕಾರಣವಾಗುತ್ತಿದೆ. ಅಮೆರಿಕಾ - ಇಸ್ರೇಲ್ ಕೂಟವು ಇರಾನ್ ಮೇಲೆ ನಡೆಸುತ್ತಿರುವ ಯುದ್ಧವೇ ಈ ಬೆಲೆ ಏರಿಕೆಗೆ ಕಾರಣ ಎಂದು ಕೇಂದ್ರ ಬಿಜೆಪಿ ಸರ್ಕಾರವು ಸಮರ್ಥಿಸಿಕೊಳ್ಳುತ್ತಿದೆ. ಆದರೆ ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಅವಕಾಶವನ್ನು ಅಮೆರಿಕಾದ ಒತ್ತಡಕ್ಕೆ ಮಣಿದು ಕೈಚೆಲ್ಲಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಅಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅರ್ಧದಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುವ ತೆರಿಗೆ ಗಳೇ ಇವೆ. 
ಹಾಗಾಗಿ ತಕ್ಷಣವೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆಗಳನ್ನು ಕಡಿತಗೊಳಿಸಬೇಕು, ತೈಲ ಕಂಪನಿಗಳ ಲಾಭಕ್ಕಾಗಿ, ದೇಶದೊಳಗೆಯೇ ಶುದ್ಧೀಕರಣ ಮಾಡಿ ಉತ್ಪಾದಿಸುವ ಪೆಟ್ರೋಲ್ ಮತ್ತು ಡೀಸೆಲ್ ಗಳಿಗೆ ಜಾಗತಿಕ ದರಗಳನ್ನು ನಿಗದಿ ಮಾಡುವ ನೀತಿಯನ್ನು ಕೈಬಿಡಬೇಕು. ಈ ಯುದ್ಧವನ್ನು ನಿಲ್ಲಿಸಿ, ಬೇರೆ ದೇಶಗಳ ಆಂತರಿಕ ವ್ಯವಹಾರಗಳಲ್ಲಿ ಮೂಗು ತೂರಿಸದಂತೆ ಅಮೆರಿಕಾದ ಸಾಮ್ರಾಜ್ಯಶಾಹಿಗಳ ಮೇಲೆ ಭಾರತವು ಒತ್ತಡ ಹೇರಬೇಕು ಎಂದು ಆಗ್ರಹಿಸಿದರು
ಈ ಸಂಧರ್ಭದಲ್ಲಿ ಕುರುಗೋಡು ಸ್ಥಳೀಯ ಸಮಿತಿ ಕಾರ್ಯದರ್ಶಿ ಗೋವಿಂದ್, ಸಮಿತಿ ಸದಸ್ಯರಾದ ಗುರಳ್ಳಿ ರಾಜ , ಮಣಿಕಂಠ ಕಾರ್ಮಿಕರಾದ ಅಂಬರೀಷ್,  ಕುರಿ ಮಲ್ಲಯ್ಯ, ವೀರೇಶ್ , ತಿಪ್ಪೇಸ್ವಾಮಿ, ಬಸವರಾಜ್, ಶ್ರೀನಿವಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್