LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಲೋಕಸಭಾ ಚುನಾವಣೆ ವೇಳೆಯಲ್ಲಿ ಕೇಜ್ರಿವಾಲ್ ಬಂಧನ : ಇಡಿಯಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್

ನವದೆಹಲಿ30:  ಲೋಕಸಭಾ ಚುನಾವಣೆ ವೇಳೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ಜಾರಿ ನಿರ್ದೇಶನಾಲಯವನ್ನು ಪ್ರಶ್ನಿಸಿದ್ದು, ಇಡಿಯಿಂದ ಪ್ರತಿಕ್ರಿಯೆ ಕೇಳಿದೆ.

ಬಂಧನದ ಸಮಯ ಕುರಿತು ಪ್ರತಿಯಿಸುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರನ್ನು ಕೇಳಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ನ್ಯಾಯಪೀಠ, ಜೀವನ ಮತ್ತು ಸ್ವಾತಂತ್ರ್ಯವು ಅತ್ಯಂತ ಮಹತ್ವದ್ದಾಗಿದ್ದು, ಅದನ್ನು ನೀವು ಅಲ್ಲಗಳೆಯುವಂತಿಲ್ಲ ಎಂದು ಹೇಳಿದೆ.

ಎಸ್ ವಿ ರಾಜುಗೆ ಇತರ ಹಲವು ಪ್ರಶ್ನೆಗಳನ್ನು ಕೇಳಿದ ಪೀಠ, ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಬಂಧನ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ಮುಂದಿನ ದಿನಾಂಕದಂದು ಉತ್ತರಿಸಲು ತನಿಖಾ ಸಂಸ್ಥೆಗೆ ಸೂಚಿಸಿತು. ಈ ಅರ್ಜಿಯನ್ನು ಬುಧವಾರದಿಂದ ಶುಕ್ರವಾರ ವಿಚಾರಣೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಬಂಧಿಸಿದ ನಂತರ ಪ್ರಸ್ತುತ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಸುಪ್ರೀಂ ಕೋರ್ಟ್ ಏಪ್ರಿಲ್ 15 ರಂದು ಇಡಿಗೆ ನೋಟಿಸ್ ಜಾರಿ ಮಾಡಿತು ಮತ್ತು ಕೇಜ್ರಿವಾಲ್ ಅವರ ಮನವಿಗೆ ಪ್ರತಿಕ್ರಿಯೆ ಕೇಳಿತು. ಏಪ್ರಿಲ್ 9 ರಂದು ಹೈಕೋರ್ಟ್ ಕೇಜ್ರಿವಾಲ್ ಅವರ ಬಂಧನವನ್ನು ಎತ್ತಿಹಿಡಿದಿತ್ತು. ಯಾವುದೇ ಅಕ್ರಮವಾಗಿ ಬಂಧಿಸಿಲ್ಲ, ಪದೇ ಪದೇ ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಡಿ ಬಂಧಿಸಿರುವುದಾಗಿ ಹೈಕೋರ್ಟ್ ಹೇಳಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್