LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟಕ್ಕೆ ಸರ್ಜರಿ? ಮಂಗಳವಾರ ಹೈಕಮಾಂಡ್ ಜತೆ ಸಿಎಂ ಡಿಸಿಎಂ ಚರ್ಚೆ

ಬೆಂಗಳೂರು, ಜುಲೈ 29: ಲೋಕಸಭೆ ಚುನಾವಣೆ ಫಲಿತಾಂಶ, ಹಗರಣಗಳ ಆರೋಪದ ನಂತರ ಇದೀಗ ಕರ್ನಾಟಕ ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟಕ್ಕೆ ಸರ್ಜರಿ ಆಗುವ ಸುಳಿವು ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ಜತೆ ಚರ್ಚೆ ನಡೆಸಲಿದ್ದಾರೆ. ನಂತರ ಸಂಪುಟ ಬದಲಾವಣೆ ಅಥವಾ ಕೆಲವು ಸಚಿವರ ಖಾತೆ ಅದಲು ಬದಲು ಮಾಡುವ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎನ್ನಲಾಗಿದೆ.

ಸಚಿವರ ಖಾತೆ ಅದಲು ಬದಲು ಮಾಡುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ ನಡೆದಿದೆ. ಕೆಲವು ಹಿರಿಯ ಸಚಿವರಿಂದಲೂ ಖಾತೆ ಬದಲಾವಣೆಗೆ ಸಲಹೆ ಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಬಿ. ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಖಾತೆ ಕೂಡ ಸದ್ಯ ಸಿಎಂ ಬಳಿಯೇ ಇದೆ. ಇದಲ್ಲದೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಯನ್ನು ಬೇರೊಬ್ಬ ಸಚಿವರಿಗೆ ಹಂಚಿಕೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆ ಫಲಿತಾಂಶವನ್ನೂ ಗಮನದಲ್ಲಿ ಇಟ್ಟುಕೊಂಡು ಖಾತೆ ಬದಲಾವಣೆಗೆ ಕಾಂಗ್ರೆಸ್ ಚಿಂತನೆ ನಡೆಸಿದೆ. ಕಳೆದೊಂದು ವರ್ಷಗಳಿಂದ ಪರಿಣಾಮಕಾರಿಯಾಗಿ ಖಾತೆ ನಿಭಾಯಿಸದವರಿಗೆ ಬದಲಾವಣೆ ಮೂಲಕ ಚುರುಕು ಮುಟ್ಟಿಸಲು ಪಕ್ಷ ತೀರ್ಮಾನಿಸಿದೆ. ಸುಮಾರು ಆರೇಳು ಮಂದಿ ಸಚಿವರ ಖಾತೆಗಳ ಅದಲು ಬದಲು ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ ನಡೆದಿದೆ. ಜತೆಗೆ, ಕೆಪಿಸಿಸಿ ಪುನರ್​​ರಚನೆ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಗಮನದಲ್ಲಿಟ್ಟುಕೊಂಡು ಕೆಪಿಸಿಸಿ ಸಾರಥ್ಯ ಬದಲಾವಣೆ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಿದೆ. ಈ ಮಧ್ಯೆ, ಕೆಪಿಸಿಸಿ ನೂತನ ಅಧ್ಯಕ್ಷರಾಗಲು ಹಲವರು ಪ್ರಭಾವ ಬಳಸುತ್ತಿದ್ದಾರೆ. ಏನೇ ಇದ್ದರೂ ಹೈಕಮಾಂಡ್ ಭೇಟಿಯ ಬಳಿಕವೇ ಸ್ಪಷ್ಟ ಚಿತ್ರಣ ಸಿಗಲಿದೆ. ಆಡಳಿತವನ್ನು ಕಪ್ಪು ಚುಕ್ಕೆ ಇಲ್ಲದಂತೆ ಇನ್ನಷ್ಟು ಚೆನ್ನಾಗಿ ನಡೆಸಿಕೊಂಡು ಹೋಗುವಂತೆ ಹೈಕಮಾಂಡ್ ಸಲಹೆ ನೀಡುವ ಸಾಧ್ಯತೆ ಇದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್