ನವದೆಹಲಿ, ಅಕ್ಟೋಬರ್ 11: ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ತಾಲಿಬಾನ್ ವಿದೇಶಾಂಗ ಸಚಿವ ಆಮೀರ್ ಖಾನ್ ಮುತ್ತಖಿ, ಭಾರತವನ್ನು ಅಫ್ಘಾನಿಸ್ತಾನದಂತೆ ನಡೆಸಿಕೊಂಡಿದ್ದಾರೆ. ಅವರು ದೆಹಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ಪಾಲ್ಗೊಳ್ಳಲು ಅವಕಾಶವನ್ನೇ ನೀಡಿರಲಿಲ್ಲ. ಭಾರತಕ್ಕೆ ಬಂದು ಅಫ್ಘಾನ್ ಕಾನೂನು ಹೇರಲು ಮುತ್ತಖಿ ಯಾರು ಜನ ಪ್ರಶ್ನೆ ಮಾಡುತ್ತಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಪ್ರಯಾಣ ವಿನಾಯಿತಿ ನೀಡಿದ ನಂತರ ಅಮೀರ್ ಖಾನ್ ಮುತ್ತಾಕಿ ಅವರ ಪ್ರವಾಸ ಸಾಧ್ಯವಾಗಿದೆ. ಇದು 2021 ರಲ್ಲಿ ಅಮೆರಿಕ ತನ್ನ ನೇತೃತ್ವದ ಪಡೆಗಳನ್ನು ಹಿಂತೆಗೆದುಕೊಂಡ ಬೆನ್ನಲ್ಲೆ ಅಧಿಕಾರಕ್ಕೆ ಮರಳಿದ ನಂತರ ಉನ್ನತ ತಾಲಿಬಾನ್ ನಾಯಕರೊಬ್ಬರು ಭಾರತಕ್ಕೆ ನೀಡಿದ ಮೊದಲ ಭೇಟಿಯಾಗಿದೆ.
ಮಹಿಳಾ ಪತ್ರಕರ್ತರು ಸೇರಿದಂತೆ ಹಲವಾರು ನಾಯಕರು ಈ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ನಮ್ಮ ದೇಶದ ಮೇಲೆ, ವಿಶೇಷವಾಗಿ ನಮ್ಮ ಸ್ವಂತ ನೆಲದಲ್ಲಿ ತನ್ನ ಷರತ್ತುಗಳನ್ನು ಹೇರಲು ಮುತ್ತಖಿ ಯಾರು ಎಂದು ಕೇಳಲಾಗುತ್ತಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.