LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೋಧಕರ ತರಬೇತಿ ಶಿಬಿರ

ಬೆಳಗಾವಿ,

ಬೆಳಗಾವಿ ಜಿಲ್ಲಾ ಪಂಚಾಯತ್ , ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಣ್ಣೂರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಚನ್ನಮ್ಮನ ಕಿತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಉಲ್ಲಾಸ ನವಭಾರತ ಸಾಕ್ಷರತಾ ಕಾರ್ಯಕ್ರಮದ ಬೋಧಕರ ತರಬೇತಿ ಶಿಬಿರವನ್ನು ಇಂದು ಹೊಸಕಾದರವಳ್ಳಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಮತಿ ಗಾಯತ್ರಿ ಅಜ್ಜನ್ನವರ ಮಾತನಾಡಿ, “ಇದು ರಾಷ್ಟ್ರೀಯ ಹೆಮ್ಮೆಯ ಕೆಲಸವಾಗಿದೆ. ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಿ ಅವರ ಬಾಳಿಗೆ ಬೆಳಕಾಗಿಸುವ ಮಹತ್ವದ ಜವಾಬ್ದಾರಿ ನಿಮ್ಮದಾಗಿದೆ” ಎಂದು ಹೇಳಿದರು.

ತರಬೇತಿ ಶಿಬಿರದಲ್ಲಿ ಸಾಕ್ಷರತಾ ಕಾರ್ಯಕ್ರಮದ ಉದ್ದೇಶಗಳು, ಬೋಧನಾ ವಿಧಾನಗಳು ಹಾಗೂ ಕಾರ್ಯಯೋಜನೆ ಕುರಿತು ಮಾರ್ಗದರ್ಶನ ನೀಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಣ್ಣಪ್ಪ ರಾಮರಾವ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬಿ.ಆರ್.ಪಿ ಗಳಾದ ಎಂ.ವೈ. ಕಡಕೋಳ, ಇ.ಸಿ.ಓ ಎಸ್.ಎಂ. ಶಹಪೂರಮಠ, ಶ್ರೀಮತಿ ಜೆ.ಸಿ. ಕೋಟಗಿ, ಸಿ.ಆರ್.ಪಿ ಗಳಾದ ವಿನಾಯಕ ಲಕ್ಕನಗೌಡರ, ವಿನೋದ ಪಾಟೀಲ, ಬಸವರಾಜ ಕುಂಬಾರ ಹಾಗೂ ವಿವಿಧ ಗ್ರಾಮಗಳ ಬೋಧಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್