LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶಿಕ್ಷಕರು ಜನಗಣತಿ ಕಾರ್ಯ ಯಶಸ್ಸಿಗೊಳಿಸಬೇಕು : ಬಸವರಾಜಪ್ಪ

ರಾಯಬಾಗ: ದೇಶದಾದ್ಯಂತ ನಡೆಯುತ್ತಿರುವ ಜನಗಣತಿಯು ಎರಡು ಹಂತಗಳಲ್ಲಿ ಮಾಡಲಾಗುತ್ತಿದ್ದು, ತರಬೇತಿ ಪಡೆಯುವ ಶಿಕ್ಷಕರು ಜನಗಣತಿ ಕಾರ್ಯ ಯಶಸ್ಸಿಗೊಳಿಸಬೇಕೆಂದು ಬಿಇಒ ಬಸವರಾಜಪ್ಪ ಆರ್ ಹೇಳಿದರು.

ಬುಧವಾರ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಜನಗಣತಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ನಡೆಯುವ ಜನಗಣತಿಯ ತರಬೇತಿ ಪಡೆದ ಶಿಕ್ಷಕರು ಭಾಗವಹಿಸಿ, ಎಲ್ಲ ಮಾಹಿತಿಯನ್ನು ಸರಿಯಾಗಿ ಕಲೆ ಹಾಕಿ, ಯಾವದೇ ಮಾಹಿತಿ ಬಿಟ್ಟು ಹೋಗದಂತೆ ನೋಡಿಕೊಂಡು ಯಶಸ್ಸಿಯಾಗಿ ಕಾರ್ಯ ಪೂರೈಸಬೇಕು ತಿಳಿಸಿದರು.


ತಹಸೀಲ್ದಾರ ಮಹಾದೇವ ಸನಮುರಿ ಮಾತನಾಡಿ, ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭಗೊಂಡಿದ್ದು, ಮೊದಲ ಹಂತದಲ್ಲಿ ಮನೆಗಳ ಗಣತಿ, ಎರಡನೆಯ ಹಂತದಲ್ಲಿ ಜನ ಗಣತಿ ನಡೆಯಲಿದೆ. ಏ.1ರಿಂದ 15 ರವರೆಗೆ ನಡೆಯಲಿರುವ ಸ್ವಯಂ ಗಣತಿಯಲ್ಲಿ ಜನರೇ ಭಾಗವಹಿಸಿ ವೆಬ್ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ನಂತರ ಗಣತಿದಾರರು ಮನೆ ಮನೆಗೆ ತೆರಳಿ ಗಣತಿ ಮಾಡಲಿದ್ದಾರೆ. ಏ.16 ರಿಂದ ಮೇ 15ರ ಅವಧಿಯಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಪರಿಶೀಲಿಸಿ ಸಂಗ್ರಹಿಸಲಿದ್ದಾರೆ ಎಂದು ತಿಳಿಸಿದರು.


ಕರ್ನಾಟಕ ಪಬ್ಲಿಕ್ ಶಾಲೆ ಉಪ ಪ್ರಾಚಾರ್ಯ ಬಿ.ಎಮ್.ಮಾಳಿ, ಎ.ಕೆ.ಬೊಂಗಳೆ, ಭೂಪಾಲ ಮಾನೆ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಮತ್ತು ತರಬೇತುದಾರರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್