ಹೈದರಾಬಾದ್: ಅವಿಭಜಿತ ಆಂಧ್ರಪ್ರದೇಶ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಡಿ ಶ್ರೀನಿವಾಸ್ ಶನಿವಾರ ಹೈದರಾಬಾದ್ನಲ್ಲಿ ನಿಧನರಾದರು ಎಂದು ಅವರ ಪುತ್ರ ಮತ್ತು ನಿಜಾಮಾಬಾದ್ ಸಂಸದ ಡಿ ಅರವಿಂದ್ ಹೇಳಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಶ್ರೀನಿವಾಸ್ ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಶ್ರೀನಿವಾಸ್ 2004 ಮತ್ತು 2009 ರ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದರು. ಮಾಜಿ ಮುಖ್ಯಮಂತ್ರಿ ವೈ ಎಸ್ ರಾಜಶೇಖರ್ ರೆಡ್ಡಿ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಅವರು ಕಾಂಗ್ರೆಸ್ ತೊರೆದು 2016 ರಿಂದ 2022 ರವರೆಗೆ ಭಾರತ್ ರಾಷ್ಟ್ರ ಸಮಿತಿಯ ರಾಜ್ಯಸಭಾ ಸದಸ್ಯರಾಗಿದ್ದರು. ತದನಂತರ ನಂತರ ಮತ್ತೆ ಕಾಂಗ್ರೆಸ್ ಸೇರಿದ್ದರು.
ಶ್ರೀನಿವಾಸ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ, ತೆಲಂಗಾಣ ಸಚಿವರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಸಂತಾಪ ಸೂಚಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.