LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿದ್ದ ಶೇ 2 ರ ಮೀಸಲಾತಿಗೆ ತಾತ್ಕಾಲಿಕ ತಡೆ

ಬೆಂಗಳೂರು, ಡಿಸೆಂಬರ್ 5: ಮಹತ್ವದ ಬೆಳವಣಿಗೆಯೊಂದರಲ್ಲಿ, ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿ ನೀಡಲಾಗುತ್ತಿರುವ ಶೇ 2 ರ ಮೀಸಲಾತಿಗೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆಯೊಡ್ಡಿದೆ. ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ನೀಡಲಾಗುತ್ತಿತ್ತು. ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.





ರಾಜ್ಯ ಸರ್ಕಾರದ ಸುತ್ತೋಲೆಯಲ್ಲೇನಿದೆ?


ದಿನಾಂಕ 18.09.2024 ರ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 295 ಸೇನೆನಿ 2023ರಲ್ಲಿ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿ ಸದರಿ ನಿಯಮದ ಉಪ-ನಿಯಮ (1) ಖಂಡ (1D) ನಂತರ (1E) ಯನ್ನು ಸೇರ್ವಡೆಗೊಳಿಸಿ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ವಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಿಂದಲೂ ಎಲ್ಲಾ ಇಲಾಖೆಗಳ ಮಂಜೂರಾದ ವೃ೦ದ ಬಲದಲ್ಲಿ ಶೇಕಡ 2 ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕರಿಗೆ ಮೀಸಲಿರಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.

ಆದರೆ, ಸರ್ಕಾರವು ಸೆಪ್ಟೆಂಬರ್ 18 ರ ಅಧಿಸೂಚನೆಯನ್ವಯ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸಲಾಗುತ್ತಿದೆ. ಆದುದರಿಂದ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2 ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ 18.09.2024ರ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಸರ್ಕಾರ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್