LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Beauty Tips

ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್​ ಪತನ

ರಾಯಗಢ03: ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್​ ಪತನಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ಶುಕ್ರವಾರ ನಡೆದಿದೆ. ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ವೇಳೆ ವಾಲಿದ ಪರಿಣಾಮ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ.

ಘಟನೆ ಸಂಭವಿಸಿದಾಗ ಚಾಪರ್ ಶಿವಸೇನೆಯ ಶಿಂಧೆ ಬಣದ (ಯುಬಿಟಿ) ನಾಯಕಿ ಸುಷ್ಮಾ ಅಂಧಾರೆಯನ್ನು ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಸಾರ್ವಜನಿಕ ರ್ಯಾಲಿಗಾಗಿ ಕರೆದೊಯ್ಯಲು ಹೋಗುತ್ತಿತ್ತು.

ಬೆಳಗ್ಗೆ 9.30ರ ಸುಮಾರಿಗೆ ಹೆಲಿಕಾಪ್ಟರ್‌ನ ಪೈಲಟ್‌ಗಳು ಅದನ್ನು ಮಹುಹಾದ್‌ನಲ್ಲಿರುವ ತಾತ್ಕಾಲಿಕ ಹೆಲಿಪ್ಯಾಡ್‌ನಲ್ಲಿ ಇಳಿಸಲು ಪ್ರಯತ್ನಿಸಿದಾಗ ಈ ದುರ್ಘಟನೆ ಸಂಭವಿಸಿದೆ. ಹೆಲಿಕಾಪ್ಟರ್ ವಾಲಿದ್ದು, ಪೈಲಟ್‌ಗಳಿಗೆ ಗಾಯಗಳಾಗಿವೆ.

ಲ್ಯಾಂಡಿಂಗ್ ಸಮಯದಲ್ಲಿ ಹೆಲಿಕಾಪ್ಟರ್ ತನ್ನ ನಿಯಂತ್ರಣವನ್ನು ಕಳೆದುಕೊಂಡಿತ್ತು, ಹೆಲಿಪ್ಯಾಡ್​ನಲ್ಲಿ ಧೂಳೆಬ್ಬಿಸುತ್ತಿತ್ತು, ದೊಡ್ಡದಾಗಿ ಶಬ್ದ ಮಾಡುತ್ತಾ ಸಮತೋಲನವನ್ನು ಕಳೆದುಕೊಂಡಿತ್ತು. ಘಟನೆಯಲ್ಲಿ ಹೆಲಿಕಾಪ್ಟರ್‌ನ ರೋಟರ್ ಬ್ಲೇಡ್‌ಗಳಿಗೂ ಹಾನಿಯಾಗಿದೆ.

ಘಟನೆಯ ನಂತರ, ಪೊಲೀಸರು ಮತ್ತು ತುರ್ತು ತಂಡದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪೈಲಟ್‌ಗಳನ್ನು ರಕ್ಷಿಸಿದರು ಮತ್ತು ಅವರಿಗೆ ಪ್ರಥಮ ಚಿಕಿತ್ಸೆ ನೀಡಿದರು.

ಮೈದಾನವು ಸಮತಟ್ಟಾಗಿರದ ಕಾರಣ ಘಟನೆ ಸಂಭವಿಸಿದೆ ಎನ್ನಲಾಗಿದೆ. ರಾಯಗಢ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್