LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಭಿವೃದ್ಧಿ ಕಾಮಗಾರಿಗಳ ಅನುದಾನಕ್ಕೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿಗಳ ನವ ಬೆಂಗಳೂರು ಯೋಜನೆಯಡಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 2019ರಲ್ಲಿ ಮಂಜೂರಾದ ಅನುದಾನದಲ್ಲಿ ಬಾಕಿ ಇರುವ 78 ಕೋಟಿ ರೂ. ಶೀಘ್ರ ಬಿಡುಗಡೆಗೆ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಸ್ಥಳೀಯ ಶಾಸಕ ಎಸ್‌. ಮುನಿರಾಜು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.


ಶಾಸಕ ಎಸ್. ಮುನಿರಾಜು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.


ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ 2019ರಲ್ಲಿ 570 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿತ್ತು. ನಂತರ ಅದನ್ನು ರದ್ದುಪಡಿಸಲಾಯಿತು. ಅನುದಾನ ಮರು ನಿಗದಿಪಡಿಸಿ 110 ಕೋಟಿ ರೂ.ಗಳನ್ನು ನೀಡಲಾಯಿತು. ಅದರಲ್ಲಿ ಕೇವಲ 32 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಇನ್ನೂ 78 ಕೋಟಿ ರೂ. ಬಾಕಿ ಇದೆ.


ಈ ಅನುದಾನ ಬಿಡುಗಡೆ ಮಾಡುವಂತೆ ಆರು ಬಾರಿ ಮನವಿ ಸಲ್ಲಿಸಲಾಗಿದೆ. ಅನುದಾನ ಇಲ್ಲದೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ. ರಸ್ತೆಗಳು ಹದಗೆಟ್ಟಿವೆ, ಶಿಥಿಲಾವಸ್ಥೆಯ ಕಟ್ಟಡಗಳನ್ನು ತೆರವುಗೊಳಿಸಬೇಕಾಗಿದೆ. ಟೆಂಡರ್ ಕರೆದ ಕಾಮಗಾರಿಗಳಿಗೆ ಹಣ ಇಲ್ಲ. ಹೊಸದಾಗಿ ಟೆಂಡರ್ ಕರೆಯುವುದಕ್ಕೂ ಅನುದಾನದ ಕೊರತೆ ಇದೆ. ಸಂಬಂಧಪಟ್ಟ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪರಿಹಾರ ಸಿಕ್ಕಿಲ್ಲ. ಹೀಗಾಗಿ ಅನಿವಾರ್ಯವಾಗಿ ಹೈಕೋರ್ಟ್ ಮೆಟ್ಟಿಲೇರಿಬೇಕಾಗಿದೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್