LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮುಸ್ಲಿಮರ ಪವಿತ್ರ ಹಜ್​ ಯಾತ್ರೆ ಜೂನ್​ 14ರಿಂದ ಆರಂಭ

ಸೌದಿ ಅರೇಬಿಯಾ,07: ಮುಸ್ಲಿಮರ ಪವಿತ್ರ ಹಜ್ ಯಾತ್ರೆ  ಇದೇ ಜೂನ್ 14 ರಿಂದ ಪ್ರಾರಂಭವಾಗಲಿದೆ ಎಂದು ಸೌದಿ ಅರೇಬಿಯಾ ಘೋಷಣೆ ಮಾಡಿದೆ. ಮುಸ್ಲಿಮರ ಪವಿತ್ರ ಯಾತ್ರಾ ಸ್ಥಳ ಎಂದರೆ ಅದು ಮೆಕ್ಕಾ, ಸೌದಿ ಅರೇಬಿಯಾದ ಈ ನಗರ ಮೆಕ್ಕಾಗೆ ಹಜ್ ಯಾತ್ರೆ ಭಾಗವಾಗಿ ಸುಮಾರು 20 ಲಕ್ಷಕ್ಕೂ ಹೆಚ್ಚು ಮುಸ್ಲಿಮರು ವರ್ಷ ಭೇಟಿ ನೀಡುತ್ತಾರೆ.

ಕೆಂದರೆ ವಿಶ್ವದ ಅತಿದೊಡ್ಡ ಧಾರ್ಮಿಕ ಕ್ಷೇತ್ರಗಳಲ್ಲಿ ಮೆಕ್ಕಾವೂ ಒಂದು. ಎಲ್ಲ ಮುಸ್ಲಿಮರು ಜೀವನದಲ್ಲಿ ಒಮ್ಮೆಯಾದರೂ ಮೆಕ್ಕಾ ಯಾತ್ರೆ ಕೈಗೊಳ್ಳಬೇಕು ಎಂಬ ಮಹದಾಸೆ ಹೊಂದಿರುತ್ತಾರೆ.

ಜೂನ್ 14 ರಂದು ಹಜ್ ಯಾತ್ರೆ ಪ್ರಾರಂಭವಾಗುತ್ತದೆ, ನಂತರ ಕ್ರಮವಾಗಿ ಜೂನ್ 15 ಮತ್ತು ಜೂನ್ 16 ರಂದು ಅರಾಫತ್ ದಿನ ಮತ್ತು ಈದ್ ಅಲ್ ಅಧಾ ಆಚರಣೆಗಳು ನಡೆಯಲಿವೆ.

ಯಾತ್ರಾರ್ಥಿಗಳಿಗೆ ಇದು ಅಧ್ಯಾತ್ಮಿಕ ಅನುಭವವಾಗಿದ್ದು, ಇಲ್ಲಿಗೆ ಭೇಟಿ ನೀಡಿದರೆ ಪಾಪಗಳು ಕಳೆದು ಹೋಗಲಿವೆ ಎಂಬ ನಂಬಿಕೆಯನ್ನು ಹೊಂದಿದ್ದಾರೆ.

1920 ರ ದಶಕದಲ್ಲಿ ಮೆಕ್ಕಾವನ್ನು ಸೌದಿ ರಾಜಮನೆತನ ತಮ್ಮ ವಶಕ್ಕೆ ತೆಗೆದುಕೊಂಡಿತು. ಆ ಬಳಿಕ ತೀರ್ಥಯಾತ್ರೆ ಆಯೋಜಿಸುವುದು ಹೆಮ್ಮೆ ಎಂದು ಅದು ಪರಿಗಣಿಸಿದೆ. ಇಲ್ಲಿನ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಶತಕೋಟಿ ಡಾಲರ್‌ಗಳನ್ನು ಹೂಡಿಕೆ ಮಾಡಲಾಗಿದೆ. ಯಾತ್ರಾರ್ಥಿಗಳ ಯೋಗಕ್ಷೇಮಕ್ಕಾಗಿ ಸೌದಿ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ.

ಆದರೂ 2015 ರಲ್ಲಿ ಇಲ್ಲಿ ಉಂಟಾದ ಕಾಲ್ತುಳಿತಕ್ಕೆ ಸುಮಾರು 2,400 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು. ಹಜ್ ಯಾತ್ರೆ ಮಹತ್ವ ಮತ್ತು ಇತಿಹಾಸ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್