LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕೊನೆಯುಸರೆಳೆದ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ

ದೇಶದ ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ಅವರು ಕೊನೆಯುಸರೆಳೆದಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು 1975 ಮತ್ತು 1998 ರ ಪರಮಾಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಣುಶಕ್ತಿ ಇಲಾಖೆಯ ಅಧಿಕಾರಿಯೊಬ್ಬರು ಈ ಕುರಿತು ಮಾಹಿತಿ ನೀಡಿದ್ದಾರೆ.


ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದ ಚಿದಂಬರಂ ಅವರು ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ 3.20 ಕ್ಕೆ ಕೊನೆಯುಸಿರೆಳೆದರು ಎಂದು ಅಧಿಕಾರಿ ತಿಳಿಸಿದ್ದಾರೆ. ಅವರು ಪರಮಾಣು ಶಕ್ತಿ ಆಯೋಗದ ಅಧ್ಯಕ್ಷರಾಗಿ ಮತ್ತು ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಚಿದಂಬರಂ ಅವರಿಗೆ 1975 ಮತ್ತು 1999 ರಲ್ಲಿ ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.


 ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಸರಿ ಇರಲಿಲ್ಲ. ವಿಜ್ಞಾನಿಯಾಗಿ ತಮ್ಮ ವೃತ್ತಿ ಜೀವನದಲ್ಲಿ, ಡಾ. ಚಿದಂಬರಂ ಅವರು ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ನಿರ್ದೇಶಕರಾಗಿ, ಪರಮಾಣು ಶಕ್ತಿ ಆಯೋಗದ (AEC) ಅಧ್ಯಕ್ಷರಾಗಿ ಮತ್ತು ಪರಮಾಣು ಶಕ್ತಿ ಇಲಾಖೆ (DAE) ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಅವರು 1994-95ರ ಅವಧಿಯಲ್ಲಿ ಇಂಟರ್ನ್ಯಾಷನಲ್ ಅಟಾಮಿಕ್ ಎನರ್ಜಿ ಏಜೆನ್ಸಿಯ (IAEA) ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್