LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪೊಲೀಸ್ ಪಡೆ ಬಸ್​ ಕಳ್ಳತನ ಮಾಡಲು ಯತ್ನ

ಕಲಬುರಗಿ, ಮೇ 17: ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬಸ್​ ಅನ್ನು ಕಳ್ಳತನ ಮಾಡಲು ಯತ್ನಿಸಿದ್ದ ಘಟನೆ ಕಲಬುರಗಿ  ನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿಆವರಣದಲ್ಲಿ ನಡೆದಿದೆ. ಸೋನು ಭಗಿರಥ ಕಳ್ಳತನದ ಆರೋಪಿ. ಕೆಎ 32 ಜಿ 1550 ನಂಬರ್​ನ ಸಿಆರ್​ಪಿಎಫ್​ ಪೊಲೀಸರ ಬಸ್ ಅನ್ನು ಕಮಿಷನರ್​ ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿತ್ತು.

ಚತ್ತಿಸಘಡ ಮೂಲದ ಕಳ್ಳ ಸೋನು ಭಗಿರಥ ಕಲಬುರಗಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದನು. ಸೋಮವಾರ ಕುಡಿದ ನಶೆಯಲ್ಲಿ ಮಧ್ಯರಾತ್ರಿ ಕಮಿಷನರ್ ಕಚೇರಿ ಆವರಣದೊಳಗೆ ಬಂದಿದ್ದಾನೆ. ಬಳಿಕ ಆವರಣದಲ್ಲಿ ನಿಲ್ಲಿಸಿದ್ದ ಸಿಆರ್​ಪಿಎಫ್​ ಪೊಲೀಸರ ಬಸ್ ಒಳಗಡೆ ಹೋಗಿದ್ದಾನೆ. ಬಸ್​ ಓರ್ವ ಕಾನ್​ಸ್ಟೇಬಲ್​ ಇದ್ದು, ನಿದ್ದೆಗೆ ಜಾರಿದ್ದರು.

ಪೊಲೀಸ್ ಕಾನ್ಸಟೇಬಲ್ ಬಸ್​ನ ಕಿಟಕಿಗೆ ತಮ್ಮ ಬಟ್ಟೆ ನೇತು ಹಾಕಿ, ಮಲಗಿದ್ದರು. ಇದನ್ನು ಕಂಡ ಕಳ್ಳ ಸೋನು ಪೊಲೀಸ್ ಕಾನ್ಸಟೇಬಲ್ ಜೇಬಿನಲ್ಲಿದ್ದ ಬಸ್​ ಕೀ ತೆಗೆದುಕೊಂಡಿದ್ದಾನೆ. ಬಳಿಕ ಬಸ್ ಸ್ಟಾರ್ಟ್ ಮಾಡುತ್ತಿದ್ದ ಹಾಗೆ ಪೊಲೀಸ್ ಕಾನ್ಸಟೇಬಲ್ ಎಚ್ಚೆತ್ತುಕೊಂಡಿದ್ದಾನೆ. ತಕ್ಷಣ ಪೊಲೀಸ್ ಕಾನ್ಸಟೇಬಲ್ ಆರೋಪಿ ಸೋನು ಭಗಿರಥನನ್ನು ಬಂಧಿಸಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್