LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಭಗವಾನ ಬುದ್ಧರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಪ್ರಕಾಶ ಧೋಡಾರೆ

 

ಕಾಗವಾಡ: "ಮಾನವ ಕುಲಕ್ಕೆ ಶಾಂತಿ ಮತ್ತು ಅಹಿಂಸೆಯ ಮಾರ್ಗ ತೋರಿದ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಜೀವನ ನಡೆಸಲು ಸಾಧ್ಯ," ಎಂದು ಭೀಮಶಕ್ತಿ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಪ್ರಕಾಶ ಧೋಡಾರೆ ಹೇಳಿದರು.
ಕಾಗವಾಡ ಪಟ್ಟಣದ ಬಸವ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬುದ್ಧರು ಬೋಧಿಸಿದ ಚತುರಾರ್ಯ ಸತ್ಯಗಳು ಹಾಗೂ ಅಷ್ಟಾಂಗ ಮಾರ್ಗಗಳು ಇಂದಿಗೂ ಪ್ರಸ್ತುತವಾಗಿದ್ದು, ದಯೆ, ಕರುಣೆ ಮತ್ತು ಅಹಿಂಸೆಯೇ ಧರ್ಮದ ಮೂಲವಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಪೀರಗೌಡ ಕಾಂಬಳೆ ಅವರು, ಬುದ್ಧರ ಪ್ರತಿಮೆಯನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ಎಷ್ಟು ಮುಖ್ಯವೋ, ಅವರ ತತ್ವಗಳನ್ನು ಮನಸ್ಸಿನಲ್ಲಿ ಸ್ಥಾಪಿಸಿಕೊಳ್ಳುವುದು ಅಷ್ಟೇ ಮುಖ್ಯ ಎಂದರು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ವಿನೋದ ಹುಲಸಾರ ಪ್ರಾಸ್ತಾವಿಕವಾಗಿ ಮಾತನಾಡಿದರು. 
ಈ ವೇಳೆ. ಪ್ರಕಾಶ ಧೋಡಾರೆ ,ವಿನೋದ,ವಿನೋದ ಹುಲಸಾರ,ದೇವನೆ, ಸುನೀಲ ಮದಭಾವಿ, ದೀಪಕ ಕಾಂಬಳೆ, ವಿದ್ಯಾಧರ್ ದೋಂಡಾರೆ, ಸತೀಶ ಬೀರನಗೆ, ಶೀಲಾಧರ ಕಾಂಬಳೆ,ಅಮರ ಕಾಂಬಳೆ, ಕಿರಣ ಸಂಭಾಳೆ, ಅನಿಕೇತ ಕಾಂಬಳೆ,ಆಕಾಶ ಕಾಂಬಳೆ,ಸೇರಿದಂತೆ ಸಮಾಜದ ಮುಖಂಡರು ಹಾಗೂ ಭೀಮಶಕ್ತಿ ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್