LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನೀಟ್​ ಪರೀಕ್ಷೆ ಅಕ್ರಮ ಪ್ರಕರಣ: ಕೌನ್ಸೆಲಿಂಗ್ ಮುಂದುವರೆಯುತ್ತೆ ಎಂದ ಸುಪ್ರೀಂ

ದೆಹಲಿ,11: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್​-ಯುಜಿ) ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ವರದಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್​ ನಿಲ್ಲಿಸಲು ನಿರಾಕರಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್​ಟಿಎ)ಗೆ ನೋಟಿಸ್ ನೀಡಿದೆ. ವಿದ್ಯಾರ್ಥಿಗಳ ಗ್ರೇಸ್​ ಅಂಕಗಳನ್ನು ನೀಡಲಾಗುತ್ತಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್​ ಹಾಗೂ ನ್ಯಾಯಮೂರ್ತಿ ಎ ಅಮಾನುಲ್ಲಾ ಅವರ ಪೀಠವು ಜುಲೈ 8 ರಂದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣಗಳ ಪಟ್ಟಿ ಮಾಡಿದೆ. ಪರೀಕ್ಷೆಯ ಪಾವಿತ್ರ್ಯತೆಯನ್ನು ಪ್ರಶ್ನಿಸಲಾಗಿದೆ ಅದಕ್ಕೆ ನಮಗೆ ಉತ್ತರಗಳು ಬೇಕು ಎಂದು ಹೇಳಿದರು. 2024ನೇ ಸಾಲಿನ ನೀಟ್​-ಯುಜಿ ಪರೀಕ್ಷೆಯನ್ನು ಹೊಸದಾಗಿ ನಡೆಸಬೇಕು ಎಂದು ಕೋರಿ ಹಲವು ಅಭ್ಯರ್ಥಿಗಳು ಸುಪ್ರೀಂಕೋರ್ಟ್​ಗೆ ಮೊರೆಹೋಗಿದ್ದಾರೆ.

2024ನೇ ಸಾಲಿನ ನೀಟ್​ ಪರೀಕ್ಷೆಯು ಕಳೆದ ತಿಂಗಳ 5 ರಂದು ನಡೆದಿತ್ತು, ದೇಶದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಹಾಗೂ ಇತರೆ ಕೋರ್ಸ್​ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಈ ಪರೀಕ್ಷೆಯನ್ನು ನಡೆಸಿತ್ತು.

ಜೂನ್​ 4ರಂದು ಪ್ರಕಟವಾದ ನೀಟ್​ ಫಲಿತಾಂಶದ ಆಧಾರದ ಮೇಲೆ ವಿದ್ಯಾರ್ಥಿಗಳ ಕೌನ್ಸೆಲಿಂಗ್​ಗೆ ತಡೆಯಾಜ್ಞೆ ನೀಡಬೇಕು ಮತ್ತು ಹೊಸದಾಗಿ ನೀಟ್​ ಯುಜಿ ಪರೀಕ್ಷೆಯನ್ನು ನಡೆಸಬೇಕು ಎಂದು ಅರ್ಜಿಗಳು ಒತ್ತಾಯಿಸಿದ್ದವು.

ನೀಟ್​ ಪರೀಕ್ಷೆ ಬರೆದ ಆಂಧ್ರಪ್ರದೇಶ ವಿದ್ಯಾರ್ಥಿಯೊಬ್ಬರು ಅರ್ಜಿ ಸಲ್ಲಿಸಿದ್ದು, ಸಮಯದ ನಷ್ಟದ ಆಧಾರದ ಮೇಲೆ 1536 ವಿದ್ಯಾರ್ಥಿಗಳಿಗೆ ಗ್ರೇಸ್​ ಅಂಕಗಳನ್ನು ನೀಡುವ ಎನ್​ಟಿಎ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.

 

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್