LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಧರ್ಮಸ್ಥಳ ಕೇಸ್​: SIT ತನಿಖೆ ಬಗ್ಗೆ ಮಹಿಳಾ ಆಯೋಗ ಅಸಮಾಧಾನ




ಬೆಂಗಳೂರು (ನ.05): ಧರ್ಮಸ್ಥಳ  ಗ್ರಾಮದಲ್ಲಿ ಅಕ್ರಮವಾಗಿ ಶವಗಳನ್ನ ಹೂತಿಡಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ​ಎಸ್​ಐಟಿ ಅಧಿಕಾರಿಗಳು ಇಂಚಿಂಚು ಮಾಹಿತಿ ಕಲೆ ಹಾಕಿ ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ಕೂಡ ಅಂತಿಮ ಹಂತ ತಲುಪಿದೆ ಎನ್ನುತ್ತಿರುವಾಗಲೇ ಕೆಲವು ಮಹತ್ವದ ಬೆಳವಣಿಗಳು ಕೂಡ ನಡೆಯುತ್ತಿದೆ. ಇದೀಗ ಎಸ್​ಐಟಿಗೆ ಮಹಿಳಾ ಆಯೋಗ ಪತ್ರ ಬರೆಯುವ ಮೂಲಕ ಅಸಮಾಧಾನ ಹೊರ ಹಾಕಿದೆ. 






ಎಸ್​ಐಟಿಗೆ ಮಹಿಳಾ ಆಯೋಗದಿಂದ ಪತ್ರ: ಧರ್ಮಸ್ಥಳ ಕೇಸ್​ ಕೇವಲ ಚಿನ್ನಯ್ಯನ ಹೇಳಿಕೆ, ಕಳೆಬರಹ ಉತ್ಖನನಕ್ಕೆ ಸೀಮಿತವಾಗಿದೆ ಎಂದು ರಾಜ್ಯ ಮಹಿಳಾ ಆಯೋಗ ಅಸಮಾಧಾನ ಹೊರ ಹಾಕಿದೆ. ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಹಾಗೂ ಅಸಹಜ ಮತ್ತು ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ರಾಜ್ಯ ಮಹಿಳಾ ಆಯೋಗವು ಎಸ್‍ಐಟಿ ಮುಖ್ಯಸ್ಥರಿಗೆ ಪತ್ರ ಬರೆದಿದೆ.


ಸಾವುಗಳ ಬಗ್ಗೆ ನಡೆದಿಲ್ಲ ತನಿಖೆ: ಧರ್ಮಸ್ಥಳದ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಯ ವ್ಯಾಪ್ತಿ ಬಗ್ಗೆ ಮಹಿಳಾ ಆಯೋಗ ಅಸಮಾಧಾನ ಹೊರಹಾಕಿದೆ.  ಮಹಿಳೆಯರ ಅಸಹಜ ಸಾವು, ಅತ್ಯಾಚಾರ ಪ್ರಕರಣದ ಸಮಗ್ರ ತನಿಖೆ ನಡೆಸಿಲ್ಲ. ಜೊತೆಗೆ ಕಳೆದ 20 ವರ್ಷಗಳ‌ ಅಸಹಜ ಸಾವಿನ ತನಿಖೆ ನಡೆಸಬೇಕು ಎಂದು ಪತ್ರದ ಮೂಲಕ ಮಹಿಳಾ ಆಯೋಗ ಆಗ್ರಹಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್