LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

‘ಪರೀಕ್ಷಾ ಪೆ ಚರ್ಚಾ’ಗೆ ಈ ಬಾರಿ ಹೊಸ ಆಯಾಮ; ಮೋದಿ ಜೊತೆ ಡಿಪ್ಪಿ, ಸದ್ಗುರು ಭಾಗಿ

ಪರೀಕ್ಷೆಯ ಒತ್ತಡವನ್ನು ನಿವಾರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ನಡೆಸುವ ವಾರ್ಷಿಕ ಸಂವಾದ ‘ಪರೀಕ್ಷಾ ಪೆ ಚರ್ಚಾ’ಗೆ ಈ ಬಾರಿ ಹೊಸ ಆಯಾಮ ದೊರೆತಿದೆ. ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಲಿದ್ದು, ವಿವಿಧ ಕ್ಷೇತ್ರಗಳ ಏಳು ಸೆಲೆಬ್ರಿಟಿಗಳು ಪರೀಕ್ಷೆಯ ಸಮಯದಲ್ಲಾಗುವ ಒತ್ತಡವನ್ನು ನಿವಾರಿಸುವ ಕುರಿತು ಸಲಹೆ ನೀಡಲಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ಫೆಬ್ರವರಿ 10ರಂದು ನವದೆಹಲಿಯಲ್ಲಿರುವ ಭಾರತ್ ಮಂಟಪದಲ್ಲಿ ನಡೆಯುತ್ತಿದೆ. ಈ ಮೊದಲು ಕೇವಲ ಪ್ರಧಾನಿಯೊಂದಿಗೆ ಮಾತ್ರ ಸಂವಾದ ನಡೆಯುತ್ತಿತ್ತು ಆದರೆ ಈಗ ಸೆಲೆಬ್ರಿಟಿಗಳು ಕೂಡ ಇದರ ಭಾಗವಾಗಿರಲಿದ್ದಾರೆ.



ಸದ್ಗುರು, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಮೇರಿ ಕೋಮ್ ಮತ್ತು ಅವನಿ ಲೇಖರಾ ಸಲಹೆಗಳನ್ನು ನೀಡಲಿದ್ದಾರೆ. ಈ ಕಾರ್ಯಕ್ರಮದ ಪ್ರಮುಖ ಅಂಶವೆಂದರೆ ಪ್ರಧಾನಿ ಮೋದಿಯವರು ವಿದ್ಯಾರ್ಥಿಗಳೊಂದಿಗೆ ನಡೆಸುವ ವಿಶೇಷ ಸಂವಾದ, ಇದರಲ್ಲಿ ಅವರು ಅವರ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ ಮತ್ತು ಶೈಕ್ಷಣಿಕ ಮತ್ತು ಜೀವನದ ಸವಾಲುಗಳನ್ನು ಹೇಗೆ ಎದುರಿಸುವುದು ಎಂಬುದರ ಕುರಿತು ಮಾರ್ಗದರ್ಶನ ನೀಡುತ್ತಾರೆ.




ಪರೀಕ್ಷಾ ಪೆ ಚರ್ಚಾದಲ್ಲಿ ಪ್ರಧಾನಿ ನರೇಂದ್ರ ಮೋದಿ 35 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿರುತ್ತಾರೆ. 50-60 ವಿದ್ಯಾರ್ಥಿಗಳು ಮತ್ತು ಇತರೆ ಪ್ರಮುಖರು ಪಾಲ್ಗೊಳ್ಳಿಲಿದ್ದಾರೆ. ಈ ಬಾರಿ ಸುಮಾರು ಆರುನೂರು ವಿದ್ಯಾರ್ಥಿಗಳು ಈ ಚರ್ಚೆಯಲ್ಲಿ ನೇರವಾಗಿ ಭಾಗವಹಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ