LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಂಜಾಬ್​ ಸರ್ಕಾರದ ವಿರುದ್ಧ ದಿಢೀರ್‌ ಪ್ರತಿಭಟನೆಗಳಿದ ಸಾವಿರಾರು ರೈತರು


ಚಂಡೀಗಢ: ಕೃಷಿ ನೀತಿ ಅನುಷ್ಠಾನಗೊಳಿಸುವಲ್ಲಿ ಎಎಪಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಪಂಜಾಬ್​ನ ಭಾರ್ತಿ ಕಿಸಾನ್​ ಯುನಿಯೂನ್​-ಬಿಕೆಯು (ಉಗ್ರಹನ್​) ಮತ್ತು ಸಂಯುಕ್ತ ಕಿಸಾನ್​ ಮೋರ್ಚಾ (ಎಸ್​ಕೆಎಂ) ಸೇರಿದಂತೆ 37 ರೈತ ಸಂಘಟನೆಯ ಸಾವಿರಾರು ರೈತರು ಧರಣಿ ಆರಂಭಿಸಿದ್ದಾರೆ.


ಸೋಮವಾರದಿಂದ ರಾಜ್ಯದಲ್ಲಿ ಮೂರು ದಿನಗಳ ಮಳೆಗಾಲದ ವಿಧಾನಸಭಾ​ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬಿಕೆಯು ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಎಸ್‌ಕೆಎಂನ ರೈತರು ಕೂಡ ಬಿಕೆಯು ಜೊತೆ ಪ್ರತಿಭಟನೆಗೆ ಮುಂದಾಗಿದ್ದಾರೆ.


ಕೃಷಿ ನೀತಿ ಅಳವಡಿಕೆಯ ಜೊತೆಗೆ ಬಿಕೆಯು, ಭೂರಹಿತ ಕಾರ್ಮಿಕರು ಮತ್ತು ರೈತರಿಗೆ ಭೂ ಹಂಚಿಕೆಯಲ್ಲಿ ವಿಳಂಬ ಮತ್ತು ಕೃಷಿ ಮತ್ತು ಕಾರ್ಮಿಕರ ಸಾಲಮನ್ನಾದಂತಹ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸುತ್ತಿದೆ. ಕೃಷಿ ನೀತಿಗೆ ಬೆಂಬಲ ವ್ಯಕ್ತಪಡಿಸಿ, ಡೆಮಾಕ್ರಟಿಕ್​​ ಟೀಚರ್ಸ್​​ ಫ್ರಂಟ್​​ ಹಾಗೂ ಗುತ್ತಿಗೆ ನೌರರ ಸಂಘಗಳು ಕೂಡ ಪ್ರತಿಭಟನಾ ರ್ಯಾಲಿಗೆ ಕೃಷಿ ಸಂಘಟನೆಗಳಿಗೆ ಬೆಂಬಲ ವ್ಯಕ್ತಪಡಿಸಿವೆ.


ಎಸ್​​ಕೆಎಂ ಕೃಷಿ ನೀತಿ ಜೊತೆಯಲ್ಲಿ ಪಂಜಾಬ್​ನಾದ್ಯಂತ ಕಾಲುವೆ ನೀರನ್ನು ಸಮರ್ಪಕವಾಗಿ ವಿತರಣೆ ಮಾಡುವ ಮತ್ತು ವಾಘಾ ಮತ್ತು ಹುಸೇನಿವಾಲಾ ಗಡಿಗಳ ಮೂಲಕ ಪಾಕಿಸ್ತಾನದೊಂದಿಗೆ ವ್ಯಾಪಾರ ಪುನರಾರಂಭಿಸುವ ಬೇಡಿಕೆಗಳನ್ನೂ ಮುಂದಿಟ್ಟಿದೆ.






ರಾಸಾಯನಿಕ ಮುಕ್ತ ಬೆಳೆಗಳ ಉತ್ತೇಜನ, ಆತ್ಮಹತ್ಯೆಗೆ ಶರಣಾದ ಕೃಷಿ ಕುಟುಂಬಕ್ಕೆ ಪರಿಹಾರ ಮತ್ತು ರಾಜ್ಯದಲ್ಲಿರುವ ಮಾದಕ ವಸ್ತು ಸಮಸ್ಯೆ ನಿವಾರಣೆಗಾಗಿ ನಾವು ಬೇಡಿಕೆ ಇಟ್ಟಿದ್ದೇವೆ ಎಂದು ಪಂಜಾಬ್​ ಖೇತ್​ ಮಜ್ದೂರ್​​ ಯೂನಿಯನ್​ನ ಪ್ರಧಾನ ಕಾರ್ಯದರ್ಶಿ ಲಚ್ಚಮಾನ್​ ಸಿಂಗ್​ ಸೆವೆವಾಲಾ ತಿಳಿಸಿದ್ದಾರೆ.


ವಿಧಾನಸೌಧದವರೆಗೆ ರೈತರು ಮೆರವಣಿಗೆ ನಡೆಸಿ, ನಮ್ಮ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ಮತ್ತು ಪ್ರತಿಪಕ್ಷ ನಾಯಕರಿಗೆ ಮನವಿ ಮಾಡಲಾಗುವುದು ಎಂದು ಬಿಕೆಯು ಪ್ರಧಾನ ಕಾರ್ಯದರ್ಶಿ ಸುಖದೇವ್​ ಸಿಂಗ್​ ಕೊರಿಕಲನ್​ ಹೇಳಿದ್ದಾರೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್