LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮತ್ತೆ ಮೂವರು ನಕ್ಸಲೀಯರ ಹತ್ಯೆ: ಛತ್ತೀಸಗಢದಲ್ಲಿ ಗುಂಡಿನ ಚಕಮಕಿ; ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಬಸ್ತಾರ್, ಏ.06: ಛತ್ತೀಸಗಢ ಮತ್ತು ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಶನಿವಾರ ಬೆಳಗಿನ ಜಾವ ನಡೆಸಿದ ಗುಂಡಿನ ಚಕಮಕಿಯಲ್ಲಿ ಮತ್ತೆ ಮೂವರು ನಕ್ಸಲೀಯರು ಹತರಾಗಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ವಾರವಷ್ಟೇ ಛತ್ತೀಸಗಢದ ಬಿಜಾಪುರ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮಹಿಳೆ ಸೇರಿದಂತೆ 13 ನಕ್ಸಲರು ಹತ್ಯೆಗೀಡಾಗಿದ್ದರು. ದಾಂತೇವಾಡ ಸೇರಿದಂತೆ ವಾರದೊಳಗೆ ನಡೆದ ಮೂರನೇ ದಾಳಿ ಇದಾಗಿದ್ದು, ದಾಳಿ ವೇಳೆ ಮೃತಪಟ್ಟವರ ಸಂಖ್ಯೆ ಇದೀಗ 16ಕ್ಕೆ ಏರಿಕೆಯಾಗಿದೆ.


ಲೋಕಸಭಾ ಚುನಾವಣೆ ಹಿನ್ನೆಲೆ ಭದ್ರತಾ ಪಡೆಗಳು ಶನಿವಾರ ಬಂಡುಕೋರರ ವಿರುದ್ಧ ಮಹತ್ವದ ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ, ಗುಂಡಿನ ಚಕಮಕಿ ನಡೆದಿದ್ದು, ಮೂವರು ನಕ್ಸಲೀಯರು ಹತ್ಯೆಗೀಡಾಗಿದ್ದಾರೆ. ಘಟನಾ ಸ್ಥಳದಿಂದ ನಕ್ಸಲೀಯರ ಮೃತದೇಹಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ತೆಲಂಗಾಣ ಗ್ರೇಹೌಂಡ್ ಮತ್ತು ಛತ್ತೀಸ್‌ಗಢ ಪೊಲೀಸರು ಜಂಟಿಯಾಗಿ ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆ ಇದಾಗಿದ್ದು, ಈ ಮಹತ್ವದ ಕಾರ್ಯಾಚರಣೆಯಲ್ಲಿ ಸೈನಿಕರು ಅತಿದೊಡ್ಡ ಯಶಸ್ಸನ್ನು ಸಾಧಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ


ಎನ್‌ಕೌಂಟರ್ ನಡೆದ ಸ್ಥಳ: ಉಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಂಕೇರ್‌ನ ಕರ್ರಿಗುಟಾ ಅರಣ್ಯದಲ್ಲಿ ಛತ್ತೀಸ್‌ಗಢ ಪೊಲೀಸರ ನೆರವಿನೊಂದಿಗೆ ತೆಲಂಗಾಣದ ನಕ್ಸಲ್ ವಿರೋಧಿ ಪಡೆ ಗ್ರೇಹೌಂಡ್ಸ್ ತಂಡದ ನೇತೃತ್ವದಲ್ಲಿ ಈ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಲಾಯಿತು. ಈ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲೀಯರು ಹತರಾಗಿದ್ದಾರೆ. ಈ ವೇಳೆ, ಒಂದು ಲಘು ಮೆಷಿನ್ ಗನ್ (LMG) ಮತ್ತು ಒಂದು AK 47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಮತ್ತು ನಕ್ಸಲೀಯರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್