LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಭಾರತ ಪ್ರವೇಶಿಸಿದ ಮೂವರು ಪಾಕಿಸ್ತಾನಿ ಭಯೋತ್ಪಾದಕರು: ಬಿಹಾರದಲ್ಲಿ ಹೈ ಅಲರ್ಟ್

ಪಾಟ್ನಾ (ಬಿಹಾರ): ಕಳೆದ ವಾರ ನೇಪಾಳದ ಮೂಲಕ ಮೂವರು ಪಾಕಿಸ್ತಾನಿ ಭಯೋತ್ಪಾದಕರು ರಾಜ್ಯಕ್ಕೆ ಪ್ರವೇಶಿಸಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಬಿಹಾರ ಪೊಲೀಸ್ ಪ್ರಧಾನ ಕಚೇರಿಯು ಗುರುವಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮತದಾರರ ಅಧಿಕಾರ ಯಾತ್ರೆ ನಡೆಯುತ್ತಿರುವ ನಡುವೆಯೇ ಈ ಎಚ್ಚರಿಕೆ ಬಂದಿದ್ದು, ರಾಜ್ಯದಲ್ಲಿ ಭದ್ರತಾ ಕಳವಳ ಮೂಡಿಸಿದೆ.


ಉಗ್ರರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಗೆ ಸೇರಿದವರು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅವರನ್ನು ರಾವಲ್ಪಿಂಡಿ ನಿವಾಸಿ ಹಸ್ನಾನಿನ್ ಅಲಿ, ಉಮರ್ಕೋಟ್‌ನ ಆದಿಲ್ ಹುಸೇನ್ ಮತ್ತು ಭವಾಲ್ಪುರದ ಮೊಹಮ್ಮದ್ ಉಸ್ಮಾನ್ ಎಂದು ಗುರುತಿಸಲಾಗಿದೆ. ಈ ಮೂವರು ಆಗಸ್ಟ್ ಎರಡನೇ ವಾರದಲ್ಲಿ ನೇಪಾಳದ ಕಠ್ಮಂಡುವಿಗೆ ಆಗಮಿಸಿ, ಕಳೆದ ವಾರ ಬಿಹಾರದ ಗಡಿಯನ್ನು ದಾಟಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.


ಗಡಿ ಜಿಲ್ಲೆಗಳಿಗೆ ವಿಶೇಷ ಸೂಚನೆ: ಸರ್ದಾರ್ ಪಟೇಲ್ ಭವನದಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯು ಉಗ್ರರ ಪಾಸ್‌ಪೋರ್ಟ್ ವಿವರಗಳನ್ನು ಗಡಿ ಜಿಲ್ಲೆಗಳಲ್ಲಿರುವ ಭದ್ರತಾ ಸಂಸ್ಥೆಗಳು ಮತ್ತು ಪೊಲೀಸ್ ಪಡೆಗಳಿಗೆ ರವಾನಿಸಿದೆ. ಭಾರತ-ನೇಪಾಳ ಗಡಿಯನ್ನು ಹಂಚಿಕೊಳ್ಳುವ ಪ್ರದೇಶಗಳಾದ ಸೀತಾಮರ್ಹಿ, ಮಧುಬನಿ, ಪಶ್ಚಿಮ ಚಂಪಾರಣ್, ಅರಾರಿಯಾ, ಕಿಶನ್‌ಗಂಜ್ ಮತ್ತು ಸುಪಾಲ್ ಸೇರಿದಂತೆ ಜಿಲ್ಲೆಗಳಿಗೆ ವಿಶೇಷ ಸೂಚನೆಗಳನ್ನು ನೀಡಲಾಗಿದೆ.


ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣಗಳು, ಹೋಟೆಲ್‌ಗಳು ಮತ್ತು ಇತರ ಜನದಟ್ಟಣೆ ಇರುವ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಶಸ್ತ್ರ ಗಡಿ ಪಡೆಯ (ಎಸ್‌ಎಸ್‌ಬಿ) ಯೋಧರನ್ನು ಕಟ್ಟೆಚ್ಚರ ವಹಿಸಲು ನಿಯೋಜನೆ ಮಾಡಲಾಗಿದೆ. ವಿಮಾನ ನಿಲ್ದಾಣ ಮತ್ತು ರೈಲ್ವೆ ಭದ್ರತಾ ಸಂಸ್ಥೆಗಳು ಜಾಗರೂಕತೆಯನ್ನು ಹೆಚ್ಚಿಸಿವೆ. ಗುಪ್ತಚರ ಘಟಕಗಳು ಸ್ಥಳೀಯ ಮಟ್ಟದಲ್ಲಿ ಅನುಮಾನಾಸ್ಪದ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ. ಸುಲಭ ಚಲನೆ ಹಿನ್ನೆಲೆಯ್ಲಿ ಬಿಹಾರ-ನೇಪಾಳ ಗಡಿಯ ಮೂಲಕ ಭಯೋತ್ಪಾದಕರು ಒಳನುಸುಳುವಿಕೆಯು ಇದೇ ಮೊದಲೇನಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್