Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೈರ್ ಒಡೆದು ಟಾಟಾ ಏಸ್ ವಾಹನ ಪಲ್ಟಿ, 32 ಜನ ಮಹಿಳಾ ಕೂಲಿ ಕಾರ್ಮಿಕರು ಅಪಾಯದಿಂದ ಪಾರು

ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಮುಖಂಡ ಚಿದಾನಂದ ಸವದಿ


ಅಥಣಿ: ಸತ್ತಿ ಗ್ರಾಮದಿಂದ ಅಡಹಳಟ್ಟಿ ಗ್ರಾಮಕ್ಕೆ ಕೆಲಸದ ನಿಮಿತ್ತ ಹೊರಟಿದ್ದ ಟಾಟಾ ಏಸ್ ವಾಹನವೊಂದು ಟೈರ್ ಒಡೆದು ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದ ಘಟನೆ ನಡೆದಿದೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೂಲಿ ಕೆಲಸಕ್ಕೆ ಹೋರಟಿದ್ದ 32 ಜನ ಮಹಿಳಾ ಕೂಲಿ ಕಾರ್ಮಿಕರಿದ್ದ ವಾಹನ ಪಲ್ಟಿಯಾಗಿ ಗಾಯಗೊಂಡ ಕಾರ್ಮಿಕರನ್ನು ಕೂಡಲೇ ಅಥಣಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ ಟಾಯರ್ ಒಡೆದು ಪರಿಣಾಮ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 32 ಜನ ಕೂಲಿ ಕಾರ್ಮಿಕರು ಗಂಬೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಕೆಲವು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಧಾವಿಸಿದರು. ಗಾಯಾಳುಗಳ ಆರೋಗ್ಯ ವಿಚಾರಿಸಿ ಅವರಿಗೆ ಧೈರ್ಯ ತುಂಬುವ ಕಾಯಕ ಮಾಡಿದ್ದು ಅಲ್ಲದೆ ವೈದ್ಯರೊಂದಿಗೆ ಮಾತನಾಡಿ ಎಲ್ಲ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಈ ಕುರಿತು ಐಗಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ವೇಳೆ ಜೇಡೆಪ್ಪ ಕುಂಬಾರ, ಪ್ರದೀಪ ನಂದಗಾಂವ, ಮಂಜು ನೂಲಿ, ಮಹಾಂತೇಶ ಠಕ್ಕಣ್ಣವರ, ಅಜಯ ಮಂಗಸೂಳಿ, ವಿಜಯ ರಜಪೂತ, ರಾಹುಲ ನಾಯಿಕ, ಆನಂದ ಮಾದಗುಡಿ, ತಾಲೂಕು ವೈಧ್ಯಾಧಿಕಾರಿ ಬಸನಗೌಡ ಕಾಗೆ, ಸಿಪಿಐ. ಸಂತೋಷ ಹಳ್ಳೂರ, ಐಗಳಿ ಪಿಎಸ್‌ಐ ಚಂದ್ರಶೇಖರ ಸಾಗನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*