LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಟೈರ್ ಒಡೆದು ಟಾಟಾ ಏಸ್ ವಾಹನ ಪಲ್ಟಿ, 32 ಜನ ಮಹಿಳಾ ಕೂಲಿ ಕಾರ್ಮಿಕರು ಅಪಾಯದಿಂದ ಪಾರು

ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಮುಖಂಡ ಚಿದಾನಂದ ಸವದಿ


ಅಥಣಿ: ಸತ್ತಿ ಗ್ರಾಮದಿಂದ ಅಡಹಳಟ್ಟಿ ಗ್ರಾಮಕ್ಕೆ ಕೆಲಸದ ನಿಮಿತ್ತ ಹೊರಟಿದ್ದ ಟಾಟಾ ಏಸ್ ವಾಹನವೊಂದು ಟೈರ್ ಒಡೆದು ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದ ಘಟನೆ ನಡೆದಿದೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೂಲಿ ಕೆಲಸಕ್ಕೆ ಹೋರಟಿದ್ದ 32 ಜನ ಮಹಿಳಾ ಕೂಲಿ ಕಾರ್ಮಿಕರಿದ್ದ ವಾಹನ ಪಲ್ಟಿಯಾಗಿ ಗಾಯಗೊಂಡ ಕಾರ್ಮಿಕರನ್ನು ಕೂಡಲೇ ಅಥಣಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ ಟಾಯರ್ ಒಡೆದು ಪರಿಣಾಮ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 32 ಜನ ಕೂಲಿ ಕಾರ್ಮಿಕರು ಗಂಬೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಕೆಲವು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಧಾವಿಸಿದರು. ಗಾಯಾಳುಗಳ ಆರೋಗ್ಯ ವಿಚಾರಿಸಿ ಅವರಿಗೆ ಧೈರ್ಯ ತುಂಬುವ ಕಾಯಕ ಮಾಡಿದ್ದು ಅಲ್ಲದೆ ವೈದ್ಯರೊಂದಿಗೆ ಮಾತನಾಡಿ ಎಲ್ಲ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಈ ಕುರಿತು ಐಗಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ವೇಳೆ ಜೇಡೆಪ್ಪ ಕುಂಬಾರ, ಪ್ರದೀಪ ನಂದಗಾಂವ, ಮಂಜು ನೂಲಿ, ಮಹಾಂತೇಶ ಠಕ್ಕಣ್ಣವರ, ಅಜಯ ಮಂಗಸೂಳಿ, ವಿಜಯ ರಜಪೂತ, ರಾಹುಲ ನಾಯಿಕ, ಆನಂದ ಮಾದಗುಡಿ, ತಾಲೂಕು ವೈಧ್ಯಾಧಿಕಾರಿ ಬಸನಗೌಡ ಕಾಗೆ, ಸಿಪಿಐ. ಸಂತೋಷ ಹಳ್ಳೂರ, ಐಗಳಿ ಪಿಎಸ್‌ಐ ಚಂದ್ರಶೇಖರ ಸಾಗನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್