LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅಕ್ರಮ ಶ್ರೀಗಂಧ ಸಾಗಾಣಿಕೆ: ಇಬ್ಬರ ಬಂಧನ





ಬಳ್ಳಾರಿ,ಫೆ.19-ಸಂಡೂರು ಉತ್ತರ ಮತ್ತು ದಕ್ಷಿಣ ವಲಯದ ಅರಣ್ಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರನ್ನು ಸೋಮವಾರ ಬಂಧಿಸಿದ್ದಾರೆ.
ಸುಶೀಲನಗರ ಗ್ರಾಮದ ಲೋಕೇಶ್ ನಾಯ್ಕ್ ಮತ್ತು ಕಿರಣ್ ಕುಮಾರ್ ಹೆಚ್.ಕೆ ಬಂಧಿತ ಆರೋಪಿಗಳು. ಒಟ್ಟು 110 ಕೆಜಿ ಶ್ರೀಗಂಧದ ತುಂಡುಗಳು ಮತ್ತು ಸಾಗಾಣಿಕೆಗೆ ಬಳಸಿದ್ದ ಮಹೇಂದ್ರ ಮೊರಾಜೊ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಆಂಧ್ರಪ್ರದೇಶದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯವರ ಸಹಕಾರದೊಂದಿಗೆ ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ರೋಲ್ಲ ಗ್ರಾಮದಲ್ಲಿರುವ ಮೆ.ನಿಷತ್ ಫ್ರೆಗ್ರೆನ್ಸ್ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ, ಅಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಸುಮಾರು 179 ಕೆಜಿ ಶ್ರೀಗಂಧವನ್ನು ಜಪ್ತಿ ಮಾಡಲಾಗಿದ್ದು, ಜಪ್ತಿ ಮಾಡಿದ ಸರಕನ್ನು ಪೆನುಕೊಂಡ ಎಫ್‌ಆರ್‌ಓ ವಶಕ್ಕೆ ನೀಡಲಾಗಿದೆ.


ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್. ಬಸವರಾಜ್, ಎಸಿಎಫ್ ಶರಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ.
ಅರಣ್ಯ ಅಧಿಕಾರಿಗಳಾದ ಸಂಡೂರು ಉತ್ತರ ಆರ್‌ಎಫ್‌ಓ ಬಿ.ಎಸ್.ಮಂಜುನಾಥ್ ಮತ್ತು ಸಂಡೂರು ದಕ್ಷಿಣ ಆರ್‌ಎಫ್‌ಓ ಸೈಯದ್ ದಾದಾ ಖಲಂದರ್ ನೇತೃತ್ವ ವಹಿಸಿದ್ದರು.
ಡಿಆರ್‌ಎಫ್‌ಓ ಗಳಾದ ತಿಪ್ಪೇಸ್ವಾಮಿ, ಮಹೇಶ್, ಹೊನ್ನೂರಸ್ವಾಮಿ, ಶ್ರೀಧರ್ ಹಾಗೂ ಬೀಟ್ ಫಾರೆಸ್ಟರ್ ರಾಘವೇಂದ್ರ ಮತ್ತು ಸಿಬ್ಬಂದಿ ವರ್ಗ ತಂಡದಲ್ಲಿದ್ದರು.
ಮೂರು ದಿನಗಳ ಕಾರ್ಯಾಚರಣೆ ಮಾಡಿದ್ದು, ಪ್ರಕರಣದಲ್ಲಿ ಇದುವರೆಗೆ ಒಟ್ಟು 07 ಆರೋಪಿಗಳ ಮೇಲೆ ಕೇಸ್ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್. ಬಸವರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್