LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಸತಿ ನಿಲಯದಲ್ಲಿ ಕಳಪೆ ಆಹಾರ: ಇಬ್ಬರು ಅಧಿಕಾರಿಗಳು ಅಮಾನತ್ತು

ಬಳ್ಳಾರಿ:02. ಜಿಲ್ಲೆಯ ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪರಿಶಿಷ್ಟ ಪಂಗಡ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡಲಾಗುತ್ತಿರುವ ಗಂಭೀರ ಆರೋಪಗಳ ಹಿನ್ನೆಲೆ, ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾ ಆಡಳಿತ ಕಠಿಣ ಕ್ರಮ ಕೈಗೊಂಡಿದೆ.

ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿ ಷಾಶು ಮೋಹಿನುದ್ದೀನ್ ಅವರು ನೀಡಿದ ಆದೇಶದಂತೆ, ವಸತಿ ನಿಲಯದ ಪ್ರಿನ್ಸಿಪಾಲ್ ಕೆ.ವಿ. ಕೋಟೇಶ್ವರ್ ಹಾಗೂ ಮೇಲ್ವಿಚಾರಕಿ ಎನ್.ವಿ. ಉಮಾದೇವಿ ಅವರನ್ನು ತಕ್ಷಣದಿಂದಲೇ ಅಮಾನತು ಮಾಡಲಾಗಿದೆ.

ಆಹಾರದ ಗುಣಮಟ್ಟದ ಬಗ್ಗೆ ಗಂಭೀರ ಆರೋಪ

ವಸತಿ ನಿಲಯದಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ಹುಳು ಬಿದ್ದ ಗೋಧಿ, ಕೊಳೆತ ತರಕಾರಿ ಹಾಗೂ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ಕುರಿತು ಪೋಷಕರು ಹಾಗೂ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಸ್ಥಳ ಪರಿಶೀಲನೆ ವೇಳೆ ಅಕ್ರಮಗಳು ಬಹಿರಂಗದೂರುಗಳ ಆಧಾರದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹ್ಯಾರೀಸ್ ಸುಮೇರ್ ಅವರು ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಕ್ಕಳ ಊಟಕ್ಕೆ ಬಳಸಲಾಗುತ್ತಿದ್ದ ಆಹಾರ ಪದಾರ್ಥಗಳಲ್ಲಿ ಹಾಳಾದ ಧಾನ್ಯಗಳು ಹಾಗೂ ಕೊಳೆತ ತರಕಾರಿಗಳು ಬಳಸಿರುವುದು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ನಿಯಮಾವಳಿ ಪ್ರಕಾರ ಕ್ರಮಈ ಗಂಭೀರ ಲೋಪವನ್ನು ಪರಿಗಣಿಸಿ, ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ 1957ರ ನಿಯಮ 10(1)(ಡಿ) ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ತಿದ್ದುಪಡಿ ನಿಯಮಗಳು 2005ರ ಷೆಡ್ಯೂಲ್–3 ಅನ್ವಯ ಕ್ರಮ ಕೈಗೊಳ್ಳಲಾಗಿದೆ. ಸಂಬಂಧಿತ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಲಾಗಿದ್ದು, ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತು ಮುಂದುವರಿಯಲಿದೆ.

ಮಕ್ಕಳ ಆರೋಗ್ಯದೊಂದಿಗೆ ನಿರ್ಲಕ್ಷ್ಯ ಅಸಹ್ಯ: ಸಾರ್ವಜನಿಕರ ಆಕ್ರೋಶವಿದ್ಯಾರ್ಥಿಗಳ ಆರೋಗ್ಯದೊಂದಿಗೆ ಈ ರೀತಿಯ ನಿರ್ಲಕ್ಷ್ಯ ತೋರಿರುವುದು ಗಂಭೀರ ವಿಷಯವಾಗಿದ್ದು, ಸಂಬಂಧಪಟ್ಟವರ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ತಕ್ಷಣ ಜಾರಿಗೆ ಬಂದ ಆದೇಶ ಅಮಾನತು ಆದೇಶ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೂಚನೆ ನೀಡಲಾಗಿದ್ದು, ವಸತಿ ನಿಲಯದ ಕಾರ್ಯಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆಯ ಮೂಲಕ ಮುಂದುವರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್