LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಜೋಧ್‌ಪುರದಲ್ಲಿ ಭುಗಿಲೆದ್ದ ಕೋಮುಗಲಭೆ: ಇಬ್ಬರು ಪೊಲೀಸರು ಗಾಯ

ಜೋಧ್‌ಪುರ: ರಾಜಸ್ಥಾನದ ಜೋಧ್‌ಪುರದಲ್ಲಿ ಕೋಮುಗಲಭೆ ಭುಗಿಲೆದಿದ್ದು, ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಅಂಗಡಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, ಎರಡು ವಾಹನಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಇಲ್ಲಿನ ಸೂರ್ ಸಾಗರ್ ಪ್ರದೇಶದ ರಾಜಾರಾಮ್ ವೃತ್ತದ ಬಳಿಯ ಈದ್ಗಾ ಹಿಂಭಾಗದಲ್ಲಿ ಗೇಟ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಘರ್ಷಣೆ ಆರಂಭವಾಗಿದೆ. ಈದ್ಗಾ ಹಿಂಬದಿಯಲ್ಲಿ ಜನರ ಓಡಾಟ ಇಲ್ಲದಂತೆ ಗೇಟ್ ಹಾಕುತ್ತಿರುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ನಿನ್ನೆ ರಾತ್ರಿ, ಉದ್ವಿಗ್ನತೆ ಉಲ್ಬಣಿಸಿ ಕೆಲವರು ಕಲ್ಲು ತೂರಾಟ ನಡೆಸಿದರು. ಹೀಗಾಗಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಡಿಸಿಪಿ ರಾಜೇಶ್ ಕುಮಾರ್ ಯಾದವ್ ಹೇಳಿ ದ್ದಾರೆ.

"ಒಂದು ಅಂಗಡಿ ಮತ್ತು ಟ್ರಾಕ್ಟರ್‌ಗೆ ಬೆಂಕಿ ಹಚ್ಚಲಾಗಿದೆ ಮತ್ತು ಜೀಪ್ ನ್ನು ಧ್ವಂಸಗೊಳಿಸಲಾಗಿದೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಪೊಲೀಸರು ಲಾಠಿ ಹಾಗೂ ನಾಲ್ಕೈದು ಸುತ್ತು ಅಶ್ರುವಾಯು ಸೆಲ್ ಸಿಡಿಸಿ ಜನರನ್ನು ಚದುರಿಸಿದ್ದಾರೆ. ಶುಕ್ರವಾರ ತಡರಾತ್ರಿ ವೇಳೆಗೆ ಪರಿಸ್ಥಿತಿ ಹತೋಟಿಗೆ ಬಂದರೂ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಶನಿವಾರ ಬೆಳಗ್ಗೆ ಭಾರೀ ಪೊಲೀಸ್ ಮತ್ತು ರಾಜಸ್ಥಾನ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ. ಎರಡೂ ಕಡೆಯ ದೂರುಗಳ ಆಧಾರದ ಮೇಲೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ರಾಜೇಂದ್ರ ಸಿಂಗ್ ಹೇಳಿದ್ದಾರೆ. ಎರಡೂ ಕಡೆಯ ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಶಂಕಿತರನ್ನು ಬಂಧಿಸಲು ಪೊಲೀಸರು ಇನ್ನೂ ಸ್ಥಳೀಯ ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್