ಮೈಸೂರು, ಅಕ್ಟೋಬರ್ 3: ಚುನಾಯಿತ ಸರ್ಕಾರವನ್ನು ಕಿತ್ತಾಕುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಜನರ ಆಶೀರ್ವಾದದಿಂದ ನಾವು 136 ಸ್ಥಾನ ಗೆದ್ದಿದ್ದೇವೆ. 5 ವರ್ಷಗಳ ಅಭಿವೃದ್ಧಿ ಕೆಲಸ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ. ದೇವರಾಜ ಅರಸು ಬಿಟ್ಟರೆ ಸಿಎಂ ಆಗಿ 5 ವರ್ಷ ಪೂರೈಸಿದ್ದು ಸಿದ್ದರಾಮಯ್ಯ ಮಾತ್ರ. ಜಿಟಿ ದೇವೇಗೌಡ ಮುಡಾದ ಸದಸ್ಯರಾಗಿದ್ದಾರೆ, ಅವರಿಗೆ ಸತ್ಯ ಗೊತ್ತಿದೆ. ಅದಕ್ಕೇ ಅವರು ಸತ್ಯ ಹೇಳಿದ್ದಾರೆ ಎಂದರು.
ಜನರ ಆಶೀರ್ವಾದ ಇರುವವರೆಗೂ ಯಾರು ಏನೂ ಮಾಡಲು ಆಗಲ್ಲ. ಜನರು, ಚಾಮುಂಡಿ ಆಶೀರ್ವಾದಿಂದ 2ನೇ ಬಾರಿ ಸಿಎಂ ಆಗಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಆತ್ಮಸಾಕ್ಷಿಗೆ ಅನುಗುಣವಾಗಿ ನಾವು ನಡೆದುಕೊಳ್ಳುತ್ತಿದ್ದೇವೆ. ಎಲ್ಲಾ ನ್ಯಾಯಾಲಯಗಳಿಗಿಂತಲೂ ಆತ್ಮಸಾಕ್ಷಿಯ ನ್ಯಾಯಾಲಯ ದೊಡ್ಡದು. ಸತ್ಯಕ್ಕೆ ಯಾವಾಗಲೂ ನ್ಯಾಯ ಸಿಗುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.