LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನೇಹಾ ಮತಾಂತರಕ್ಕೆ ಫಯಾಜ್ ಯತ್ನ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ

ಹುಬ್ಬಳ್ಳಿ, ಏಪ್ರಿಲ್ 25: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಕೊಲೆಯಾಗಿರುವ ನೇಹಾ ಹಿರೇಮಠ  ಅವರನ್ನು ಮತಾಂತರ ಮಾಡಲು ಕೊಲೆ ಆರೋಪಿ ಫಯಾಜ್ ಯತ್ನಿಸಿದ್ದ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದು, ಹಿಗಾಗಿ ಆ ಆಯಾಮದಿಂದಲೇ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ  ಮಾತನಾಡಿದ ಅವರು, ನೇಹಾ ಮತಾಂತರ‌ ಮಾಡಲು ಫಯಾಜ್ ಯತ್ನಿಸಿದ್ದ. ಈ ಬಗ್ಗೆ ನೇಹಾ ತಂದೆ ನಿರಂಜನ ಹಿರೇಮಠ ಕೂಡ ಆರೋಪ ಮಾಡಿದ್ದಾರೆ. ನೇಹಾ ಕೊಲೆ ಕೇಸ್ ಲವ್ ಅ್ಯಂಗಲ್​​ನಲ್ಲಿಯೇ ತನಿಖೆಯಾಗಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ್ದು ದ್ವಂದ್ವ ನಿಲುವು ಅನ್ನೋದಕ್ಕೆ ನೇಹಾ ಹಿರೇಮಠ ಪ್ರಕರಣವೂ ಒಂದು. ನೇಹಾ ತಂದೆ ನಿರಂಜನ ನೀವೇ ನ್ಯಾಯ ಕೊಡಿಸಬೇಕು ಅಂದಿದ್ದರು. ಹೀಗಾಗಿ ನಾವು ಸಂವೇದಾನಶೀಲದಿಂದ ಹೋರಾಟ ಮಾಡಿದೆವು. ಕಾಂಗ್ರೆಸ್ ಪಕ್ಷದವರು ಅಸಭ್ಯ, ಅಸಡ್ಡೆಯಿಂದ ಮಾತನಾಡಿದರು. ‘ಹೇ ಅದೇನ್ ಬಿಡ್ರೀ’ ಎಂದು ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಜನರ ಜೀವದ ಜೊತೆ ಚೆಲ್ಲಾಟ ಆಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳೋದು ಇವರ ಡಬಲ್ ಸ್ಟ್ಯಾಂಡರ್ಡ್ ಎಂದು ಜೋಶಿ ಕಿಡಿಕಾರಿದರು.

ಕರ್ನಾಟಕದಲ್ಲಿ ಮುಸ್ಲಿಮರಿಗೆ ಯಾಕೆ ಧರ್ಮಾಧಾರಿತ ಮೀಸಲಾತಿ ಕೊಟ್ಟಿದೀರಿ ಎಂದು ಕಾಂಗ್ರೆಸ್​ ಪಕ್ಷವನ್ನು ಪ್ರಶ್ನಿಸಿದ ಅವರು, ಕರ್ನಾಟಕದಲ್ಲಿ ಹಿಂದುಳಿದ ದಲಿತರ, ಮೀಸಲಾತಿಯನ್ನು ಮುಸ್ಲಿಮರಿಗೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು. ಕರ್ನಾಟಕಕ್ಕೆ ಕೊಟ್ಟವರು ನೀವೇ, ಕರ್ನಾಟಕಕ್ಕೆ ನೀವು ವಸೂಲಿಗೆ ಬರುತ್ತೀರಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ವಿರುದ್ಧ ಜೋಶಿ ವಾಗ್ದಾಳಿ ನಡೆಸಿದರು.

ಈ ಮಧ್ಯೆ ನೇಹಾ ಹತ್ಯೆಗೆ ಆರೋಪಿ ಫಯಾಜ್ ಒಂದು ವಾರದಿಂದ ಸಂಚು ಹೂಡಿದ್ದ ಮತ್ತು ಸಿದ್ಧತೆ ನಡೆಸಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಕೊಲೆ ಮಾಡುವ ಕೆಲವು ದಿನಗಳ ಮುನ್ನ ನೇಹಾ ಹಿರೇಮಠ ಮನೆ ಬಳಿಯೇ ಫಯಾಜ್​​ ಓಡಾಡಿದ್ದಾನೆ. ಹತ್ಯೆ ಮಾಡುವ ಐದು ದಿನಗಳ ಮೊದಲೇ ಚಾಕುವೊಂದನ್ನು ಖರೀದಿ ಮಾಡಿದ್ದ ಎಂಬ ವಿಚಾರವೂ ಬೆಳಕಿಗೆ‌ ಬಂದಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ