LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಜೂನ್.11 ಅಂತಾರಾಷ್ಟ್ರೀಯ ಆಟದ ದಿನ; ವಿಶ್ವಸಂಸ್ಥೆ ಘೋಷಣೆ

ಬೆಂಗಳೂರು: ವಿಶ್ವಸಂಸ್ಥೆಯು ಜೂನ್ 11 ಅನ್ನು 'ಅಂತರರಾಷ್ಟ್ರೀಯ ಆಟದ ದಿನ' ಎಂದು ಘೋಷಿಸಿದೆ. ಈ ವರ್ಷದಿಂದಲೇ ಇದು ಅನುಷ್ಠಾನಕ್ಕೆ ಬರಲಿದ್ದು ಜಾಗತಿಕ ಮಟ್ಟದಲ್ಲಿ ಉದ್ಘಾಟನೆಯಾಗಲಿದೆ. ವಿಶ್ವಾದ್ಯಂತ ಈ ದಿನವನ್ನು ಮಕ್ಕಳು ಕ್ರೀಡಾ ದಿನವಾಗಿ ಸಂಭ್ರಮಿಸಲಿದ್ದಾರೆ.

ಮಕ್ಕಳ ಆಟವಾಡುವ ಹಕ್ಕನ್ನು ರಕ್ಷಿಸಲು ಅಂತಾರಾಷ್ಟ್ರೀಯ ಆಟದ ದಿನವಾಗಿ ಒಂದು ದಿನವನ್ನು ಗುರುತಿಸುವಂತೆ ವಿಶ್ವಸಂಸ್ಥೆಗೆ ಮಕ್ಕಳೇ ಮನವಿ ಮಾಡಿದ್ದರು. ಮನವಿ ಬೆನ್ನಲ್ಲೇ ವಿಶ್ವಸಂಸ್ಥೆ ಜೂನ್.11ನ್ನು ಅಂತಾರಾಷ್ಟ್ರೀಯ ಆಟದ ದಿನ ಎಂದು ಘೋಷಣೆ ಮಾಡಿದೆ.

ವಿಶ್ವಸಂಸ್ಥೆ ಅಂಗೀಕಾರ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಇಲಾಖೆಯ ಆದೇಶ ಹೊರಡಿಸಿದ್ದು, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಜೂ.11ರಂದು ಅಂತಾರಾಷ್ಟ್ರೀಯ ಆಟದ ದಿನವನ್ನಾಗಿ ಆಚರಿಸುವಂತೆ ಸೂಚನೆ ನೀಡಿದೆ. ಅತ್ಯಂತ ದುರ್ಬಲ ವರ್ಗದವರಿಗೆ, ಅದರಲ್ಲೂ ವಿಶೇಷವಾಗಿ ವಿಕಲಚೇತನ ಮಕ್ಕಳು, ಶಾಲೆಯಿಂದ ಹೊರಗುಳಿದ ಮಕ್ಕಳು ಮತ್ತು ಕೆಲಸ ಮಾಡುವ ಮಕ್ಕಳು ಕಡಿಮೆ ಆಟವಾಡಲು ಅವಕಾಶವಿದ್ದು, ಇವರ ಮೇಲೆ ವಿಶೇಷ ಗಮನ ನೀಡಬೇಕು ಎಂದು ತಿಳಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಂತಾರಾಷ್ಟ್ರೀಯ ಆಟದ ದಿನದ ಅಂಗವಾಗಿ ಗ್ರಾಮ ಪಂಚಾಯಿತಿ ಜಾಗೃತಿ ಕೇಂದ್ರಗಳಲ್ಲಿ ಎಲ್ಲ ಮಕ್ಕಳಿಗಾಗಿ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲು ನಿರ್ಧರಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್