LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಶಾರುಖ್ ಜನಪ್ರಿಯತೆ ಬಗ್ಗೆ ಅಮೆರಿಕ ರಾಯಭಾರಿ ಎರಿಕ್ ಮೆಚ್ಚುಗೆ

ಮುಂಬೈ, ಏಪ್ರಿಲ್.02: ಶಾರುಖ್ ಖಾನ್ ಬಾಲಿವುಡ್‌ನ ಕಿಂಗ್ ಮಾತ್ರವಲ್ಲ, ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಅವರ ಜನಪ್ರಿಯತೆ ಪ್ರಪಂಚದಾದ್ಯಂತ ಇದೆ. ಕಳೆದ ವರ್ಷ ಅವರು ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ಮೊದಲ ಬಾರಿಗೆ ಭಾರತಕ್ಕೆ ಬಂದರು. ಈ ವೇಳೆ ಅವರು ಶಾರುಖ್ ಖಾನ್ ಅವರನ್ನು ಭೇಟಿಯಾದರು. ಈಗ ಆ ಭೇಟಿಯ ನೆನಪುಗಳನ್ನು ಮೆಲುಕು ಹಾಕಿರುವ ಅವರು, ಶಾರುಖ್ ಅವರನ್ನು ಭೇಟಿಯಾದ ಬಳಿಕ ಕಚೇರಿಗೆ ಹೋದಾಗ ಅಲ್ಲಿನ ಸಿಬ್ಬಂದಿ ಹೇಗೆ ಪ್ರತಿಕ್ರಿಯಿಸಿದರು ಎಂಬುದನ್ನು ಹೇಳಿದ್ದಾರೆ.

ಎರಿಕ್ ಅವರಿಗೆ ಆರಂಭದಲ್ಲಿ ಶಾರುಖ್ ಖಾನ್ ಮತ್ತು ಅವರ ಜನಪ್ರಿಯತೆ ಬಗ್ಗೆ ಅಷ್ಟು ತಿಳಿದಿರಲಿಲ್ಲ. ಆದರೆ ಅವರು ತಮ್ಮ ಕಚೇರಿಯಲ್ಲಿ ಶಾರುಖ್ ಅವರನ್ನು ಭೇಟಿಯಾದ ಬಗ್ಗೆ ಹೇಳಿದಾಗ ಅಲ್ಲಿನ ಸಿಬ್ಬಂದಿ ಪ್ರತಿಕ್ರಿಯಿಸಿದ್ದನ್ನು ನೋಡಿ ಅವರಿಗೆ ಜನಪ್ರಿಯತೆ ಬಗ್ಗೆ ಒಂದು ಐಡಿಯಾ ಸಿಕ್ಕಿತು. ಅದರ ಬಗ್ಗೆ ಅವರು ಹೇಳಿದ್ದರು.

‘ನಾನು ಭಾರತಕ್ಕೆ ಬಂದಾಗ ಆರಂಭದ ವಾರಗಳಲ್ಲೇ ಶಾರುಖ್ ಖಾನ್ ಅವರನ್ನು ಭೇಟಿಯಾದೆ. ಆ ಸಮಯದಲ್ಲಿ ನಾನು ಅವರೊಂದಿಗೆ ಕ್ರಿಕೆಟ್ ಬಗ್ಗೆ ಮಾತನಾಡಿದೆ. ಶಾರುಖ್ ಖಾನ್ ಐಪಿಎಲ್​ನಲ್ಲಿ ಕೆಕೆಆರ್‌ ತಂಡದ ಮಾಲೀಕರಾಗಿದ್ದಾರೆ. ನಾನು ನನ್ನ ಕಚೇರಿಯನ್ನು ತಲುಪಿದಾಗ ಎಲ್ಲರಿಗೂ ಆಶ್ಚರ್ಯವಾಯಿತು. ನೀವು ಯಾರನ್ನು ಭೇಟಿಯಾಗಿದ್ದೀರಿ ಎಂದು ನಿಮಗೆ ತಿಳಿದಿದೆಯೇ ಎಂದು ಕೇಳಿದರು. ನಾನು ಹೌದು, ಶಾರುಖ್ ಖಾನ್ ಅವರನ್ನು ಭೇಟಿ ಮಾಡಿದೆ ಎಂದು ಹೇಳಿದೆ. ನಾನು ಭೇಟಿಯಾದ ವ್ಯಕ್ತಿಗೆ ಇಷ್ಟು ಜನಪ್ರಿಯತೆ ಇದೆ ಎಂಬುದು ನನಗೆ ಗೊತ್ತಿರಲಿಲ್ಲ ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ’ ಎಂದಿದ್ದಾರೆ.

ಎರಿಕ್ 2023ರಲ್ಲಿ ಮೊದಲ ಬಾರಿಗೆ ಭಾರತಕ್ಕೆ ಬಂದಾಗ ಅವರು ಶಾರುಖ್ ಖಾನ್ ಅವರನ್ನು ಮನ್ನತ್‌ನಲ್ಲಿ ಭೇಟಿ ಮಾಡಿದ್ದರು. ಆ ಸಮಯದಲ್ಲಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಶಾರುಖ್ ಅವರೊಂದಿಗಿನ ಫೋಟೋಗಳನ್ನು ಹಂಚಿಕೊಂಡಿದ್ದರು. ಮನ್ನತ್‌ನಲ್ಲಿ ಶಾರುಖ್ ಖಾನ್ ಅವರ ಜೊತೆ ಹಲವು ವಿಚಾರ ಚರ್ಚೆ ಮಾಡಿದ್ದರು. ‘ನಾನು ಹಿಂದಿ ಸಿನಿಮಾ ಬಗ್ಗೆ, ಬಾಲಿವುಡ್ ಮತ್ತು ಹಾಲಿವುಡ್ ಮೇಲೆ ಸಾಂಸ್ಕೃತಿಕ ಪ್ರಭಾವದ ಬಗ್ಗೆಯೂ ಮಾತನಾಡಿದ್ದೇವೆ’ ಎಂದು ಅವರು ಈ ಮೊದಲು ಹೇಳಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್