LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭೀಕರ ಭೂಕುಸಿತ ಪ್ರಕರಣದ ರಕ್ಷಣಾ ಕಾರ್ಯಾಚರಣೆಗೆ ಭೂಗರ್ಭ ರಾಡಾರ್ ಬಳಕೆ

ಉತ್ತರ ಕನ್ನಡ: ಕಳೆದ ವಾರ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತ ಪ್ರಕರಣದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆ ಕಾರ್ಯಾಚರಣೆಗೆ ಭೂಗರ್ಭ ರಾಡಾರ್ ಬಳಕೆ ಮಾಡುತ್ತಿದೆ.

ಈ ದುರ್ಘಟನೆಯಲ್ಲಿ ಈ ವರೆಗೂ ಮಹಿಳೆ ಸೇರಿದಂತೆ 8 ಮಂದಿಯ ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಇಬ್ಬರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ.

ಹೀಗಾಗಿ ಸೇನೆ ಅತ್ಯಾಧುನಿಕ ಪರಿಕರಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದು, ಈ ಪೈಕಿ ಫೆರೆಕ್ಸ್ ಲೊಕೇಟರ್ 150 ಎಂಬ ಭೂಗರ್ಭ ರಾಡಾರ್ ಯಂತ್ರವನ್ನು ಬಳಕೆ ಮಾಡುತ್ತಿದೆ. ಈ ರಾಡಾರ್ ಯಂತ್ರವು ನೆಲದೊಳಗೆ ನುಗ್ಗುವ ಸಾಮರ್ಥ್ಯವನ್ನು ಹೊಂದಿದ್ದು, ಇದರಿಂದ ಅವಲಶೇಷಗಳಡಿ ಸಿಲುಕಿರುವವರ ಕುರಿತು ಮಾಹಿತಿ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ಈ ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆ ಸೈನಿಕರ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದ್ದು, ಸ್ಥಳೀಯ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ, ಅಗ್ನಿಶಾಮಕದಳ ಮತ್ತು ಇತರ ಏಜೆನ್ಸಿಗಳು ಸಹ ಹರಸಾಹಸ ಪಟ್ಟು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಪ್ರಮುಖವಾಗಿ ಭಾರತೀಯ ಸೇನೆಯು ಮರಾಠ ಲೈಟ್ ಇನ್‌ಫಾಂಟ್ರಿ ರೆಜಿಮೆಂಟಲ್ ಸೆಂಟರ್ (MLIRC) ಯಿಂದ ಎರಡು ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (HADR) ತಂಡಗಳು ಕಾರ್ಯಾಚರಣೆ ಆರಂಭಿಸಿದ್ದು, ಈ ತಂಡಗಳು ಒಬ್ಬ ಅಧಿಕಾರಿ, ಇಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು (JCO ಗಳು), ಮತ್ತು 55 ಇತರ ಶ್ರೇಣಿಗಳನ್ನು (OR) ಒಳಗೊಂಡಿದೆ.

ರಕ್ಷಣಾ ಕಾರ್ಯಗಳನ್ನು ಮತ್ತಷ್ಟು ಬಲಪಡಿಸಲು, ಮಿಲಿಟರಿ ಇಂಜಿನಿಯರಿಂಗ್ ಕಾಲೇಜಿನ (CME) ಹೆಚ್ಚುವರಿ ತಂಡವನ್ನು ನಿನ್ನೆ ನಿಯೋಜಿಸಲಾಗಿದೆ. ಒಂದು JCO ಮತ್ತು ಎರಡು OR ಗಳನ್ನು ಒಳಗೊಂಡಿರುವ ಈ ತಂಡವು ಫೆರೆಕ್ಸ್ ಲೊಕೇಟರ್ 150 ಅನ್ನು ಹೊಂದಿದೆ, ಇದು ಶಿಲಾಖಂಡರಾಶಿಗಳ ಅಡಿಯಲ್ಲಿ ಸಿಕ್ಕಿಬಿದ್ದಿರುವ ವ್ಯಕ್ತಿಗಳನ್ನು ಪತ್ತೆಹಚ್ಚಲು ನಿರ್ಣಾಯಕ ಪಾತ್ರ ನಿರ್ವಹಿಸುತ್ತವೆ ಎನ್ನಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್