LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣ: ನಾಗೇಂದ್ರ, ದದ್ದಲ್ ಮನೆಗಳ ಮೇಲೆ ಇಡಿ ದಾಳಿ


ರಾಯಚೂರು/ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ವಿಚಾರಣೆಗೊಳಗಾಗಿದ್ದ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಮನೆಗಳ ಮೇಲೆ ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇಂದು ಏಕಕಾಲದಲ್ಲಿ ದಾಳಿ ನಡೆಸಿದರು.


ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ವಾರ್ಡ್ ಸಂಖ್ಯೆ 2, ಆರ್‌ಆರ್ (ರಾಮ್ ರಹೀಮ್) ಕಾಲೊನಿಯಲ್ಲಿರುವ ದದ್ದಲ್​ ಮನೆಯ ಮೇಲೆ ದಾಳಿ ನಡೆಸಿರುವ ಮೂವರು ಅಧಿಕಾರಿಗಳ ತಂಡ, ಬೆಳಗ್ಗೆ 7 ಗಂಟೆಯಿಂದ ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದೆ.


ಇಬ್ಬರು ವಶಕ್ಕೆ: ಬಳ್ಳಾರಿಯಲ್ಲಿ ಬಿ.ನಾಗೇಂದ್ರ ಅವರ ಇಬ್ಬರು ಆಪ್ತ ಸಹಾಯಕರಾಗಿದ್ದ ವಿಜಯಕುಮಾರ್ ಮತ್ತು ಚೇತನ್ ಎಂಬವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮುಂಜಾನೆ, ಸಿಆರ್​ಪಿಎಫ್ ಭದ್ರತೆಯೊಂದಿಗೆ ಮೂರು ತಂಡಗಳಾಗಿ ಬಳ್ಳಾರಿಗೆ ಆಗಮಿಸಿದ ಇಡಿ ಅಧಿಕಾರಿಗಳು ನೆಹರು ಕಾಲೊನಿಯಲ್ಲಿರುವ ನಾಗೇಂದ್ರ ಮನೆ ಮೇಲೆ ದಾಳಿ ಮಾಡಿದರು.




ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ‌ ಅಧಿಕಾರಿಗಳು, ನಾಗೇಂದ್ರರ ಮನೆಯಲ್ಲಿರುವ ದಾಖಲೆಗಳನ್ನೂ ಪರಿಶೀಲಿಸುತ್ತಿದ್ದಾರೆ. ಸ್ಥಳೀಯ ಪೊಲೀಸರ ನೆರವು ಪಡೆಯದ ಇಡಿ, ಸಿಆರ್​ಪಿಎಫ್‌ ಯೋಧರ ಸಹಕಾರದಿಂದ ದಾಳಿ ನಡೆಸಿದೆ. ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೂ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.


ಬೆಂಗಳೂರಿನ ಮನೆಯಲ್ಲೂ ಶೋಧ: ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ರಾಮ್ಕಿ ಉತ್ಸವ್​ ಅಪಾರ್ಟ್ಮೆಂಟ್​ನಲ್ಲಿರುವ ನಾಗೇಂದ್ರ ಅವರ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅದೇ ರೀತಿ ಬಸವನಗೌಡ ದದ್ದಲ್ ನಿವಾಸವಲ್ಲದೆ, ಬೆಂಗಳೂರು ನಗರದ ಯಲಹಂಕ, ಕೋರಮಂಗಲ ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿ ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್