LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಹಿರಿಯ ನಟ ಅಸ್ರಾನಿ ಇನ್ನಿಲ್ಲ: ಗಣ್ಯರ ಕಂಬನಿ

ಮುಂಬೈ: ಪ್ರಸಿದ್ಧ ಹಾಸ್ಯ ನಟ ಮತ್ತು ಬಾಲಿವುಡ್ ಅನುಭವಿ ಕಲಾವಿದ ಗೋವರ್ಧನ್ ಅಸ್ರಾನಿ 84 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.


ಸಾವಿಗೂ ಮುನ್ನ ದೀಪಾವಳಿ ಶುಭಾಶಯ ಕೋರಿದ್ದ ನಟ: ಸೋಮವಾರ ಸಾಂತಾಕ್ರೂಜ್ ಸ್ಮಶಾನದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಅವರ ಸಾವಿಗೆ ಕೆಲವೇ ಗಂಟೆಗಳ ಮೊದಲು ನಟ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರುವ ಪೋಸ್ಟ್ ಹಂಚಿಕೊಂಡಿದ್ದರು. ಅಸ್ರಾನಿ ಅವರು ಭಾರತೀಯ ಚಿತ್ರರಂಗದ ಅತ್ಯಂತ ಪ್ರಸಿದ್ಧ ಹಾಸ್ಯ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು.


ಪುಣೆಯ FTIIನಲ್ಲಿ ತರಬೇತಿ ಪಡೆದಿದ್ದ ಅಸ್ರಾನಿ: ಐದು ದಶಕಗಳಿಗೂ ಹೆಚ್ಚು ಕಾಲದ ತಮ್ಮ ವೃತ್ತಿಜೀವನದಲ್ಲಿ ಅವರು 350 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಪುಣೆಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ (FTII) ತರಬೇತಿ ಪಡೆದುಕೊಂಡಿದ್ದರು. 1960 ರ ದಶಕದ ಮಧ್ಯಭಾಗದಲ್ಲಿ ಹಿಂದಿ ಚಲನಚಿತ್ರೋದ್ಯಮಕ್ಕೆ ಪ್ರವೇಶಿಸುವ ಮೊದಲು ತಮ್ಮ ಕೌಶಲ್ಯವನ್ನು ತೋರ್ಪಡಿಸಿದ್ದರು. ಗಂಭೀರ ಮತ್ತು ಪೋಷಕ ಪಾತ್ರಗಳೊಂದಿಗೆ ತಮ್ಮ ನಟನಾ ಕೌಶಲವನ್ನು ಶುರು ಮಾಡಿದರೂ ಕೂಡಾ ಅಸ್ರಾನಿ ಅವರು ಹಾಸ್ಯ ಕಲಾವಿದರಾಗಿ ತಮ್ಮನ್ನು ಗುರುತಿಸಿಕೊಂಡರು. 1970 ಮತ್ತು 1980 ರ ದಶಕಗಳಲ್ಲಿ ಅವರು ಹಿಂದಿ ಚಿತ್ರರಂಗದ ಪ್ರಮುಖ ಹಾಸ್ಯ ನಟರಾಗಿ ಗಮನ ಸೆಳೆದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್