LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ವಿಜಯೇಂದ್ರ

 

 

ಬಳಗಾವಿ: ಪರಮಪೂಜ್ಯ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದೇವೆ. ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ವಾಮೀಜಿಗಳಿಗೆ ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಬೆಳಗಾವಿಯಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಸ್ವಾಮೀಜಿ ಅವರ ಭೇಟಿ ವೇಳೆ ಪಕ್ಷದ ಹಿರಿಯ ಮುಖಂಡರು ಮತ್ತು ಮಾಜಿ ಸಚಿವ ಸಿ.ಸಿ.ಪಾಟೀಲ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಶೈಲೇಂದ್ರ ಬೆಲ್ದಾಳೆ, ಶರಣು ಸಲಗರ್, ಭಾ.ಜ.ಪಾ ಜಿಲ್ಲಾ ಅಧ್ಯಕ್ಷರಾದ ಸುಭಾಷ್ ಪಾಟೀಲ ಪಕ್ಷದ ಎಲ್ಲ ಮುಖಂಡರು ಇದ್ದರು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸ್ವಾಮೀಜಿಗಳಲ್ಲಿ ಮತ್ತೊಂದು ಮನವಿ ಮಾಡಿದ್ದೇನೆ. ಕೆಲವು ವೈಯಕ್ತಿಕ ಕಾರಣಕ್ಕೆ ಪಂಚಮಸಾಲಿ ಹೋರಾಟಕ್ಕೆ ಹಿಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರ ಬೆಂಬಲ ಇಲ್ಲ ಎಂದು ಬಿಂಬಿಸುವ ಪ್ರಯತ್ನ ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ ಎಂದು ವಿವರಿಸಿದರು. ಹಿಂದೆ ಬಿಜೆಪಿ ಸರಕಾರ ಇದ್ದಾಗ ಯಡಿಯೂರಪ್ಪನವರು ಮುಖ್ಯಮಂತ್ರಿಗಳಿದ್ದಾಗ, ಪಂಚಮಸಾಲಿ ಸಮಾಜಕ್ಕೆ 3 ಬಿ ಕೊಡಲಾಗಿತ್ತು. 3 ಬಿ ಕೊಟ್ಟ ಕಾರಣದಿಂದಲೇ ಸಮಾಜಕ್ಕೆ 2 ಎ ಸ್ಥಾನಮಾನ ನೀಡಬೇಕೆಂದು ಹಕ್ಕೊತ್ತಾಯ ಮಂಡಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಈ ಹೋರಾಟಕ್ಕೆ ನಮ್ಮ ಬೆಂಬಲ ಇಲ್ಲ; ಯಡಿಯೂರಪ್ಪ ಅವರ ವಿರೋಧ ಇದೆ, ಅನ್ಯಾಯ ಮಾಡಿದರು- ಇವ್ಯಾವುದು ಕೂಡ ಸರಿಯಲ್ಲ; ಸತ್ಯಕ್ಕೆ ದೂರ ಎಂದು ಸ್ಪಷ್ಟಪಡಿಸಿದರು. ಈ ತಪ್ಪು ಅಭಿಪ್ರಾಯಕ್ಕೆ ಅವಕಾಶ ಕೊಡಬಾರದೆನ್ನುವ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಸ್ವಾಮೀಜಿಗಳು ಮನಸ್ಸು ಬಿಚ್ಚಿ ಸಂತೋಷವಾಗಿ ಮಾತನಾಡಿದ್ದಾರೆ. ಸಾಕಷ್ಟು ತಪ್ಪು ಅಭಿಪ್ರಾಯಗಳಿತ್ತು; ಕಾಂಗ್ರೆಸ್ ಸರಕಾರ ಬಂದ ಬಳಿಕ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ. ಹಿಂದೆ ಯಾವುದೇ ಸರಕಾರ, ಯಡಿಯೂರಪ್ಪನವರು ಮುಖ್ಯಮಂತ್ರಿಗಳಿದ್ದಾಗ ಸಹ ನಮ್ಮ ಸಮಾಜದ ಮೇಲೆ ಈ ರೀತಿ ದೌರ್ಜನ್ಯಗಳು ಆಗಿಲ್ಲ ಎಂದು ತಿಳಿಸಿದ್ದಾಗಿ ಹೇಳಿದರು.

ಕಾಂಗ್ರೆಸ್ ಸರಕಾರ ಬಂದ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ; ಹೋರಾಟವನ್ನು ಹತ್ತಿಕ್ಕುವ ಕೆಲಸ ಆಗುತ್ತಿದೆ; ಖಂಡಿತ ನೀವೆಲ್ಲರೂ ಸಹಕಾರ ನೀಡಬೇಕೆಂದು ಹೇಳಿದ್ದಾರೆ. ನಾವು ಕೂಡ ಸಂಪೂರ್ಣ ಸಹಕಾರ, ಬೆಂಬಲವನ್ನು ನೀಡುವುದಾಗಿ ತಿಳಿಸಿದ್ದೇನೆ ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್