LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಗುಬ್ಬಿಯಲ್ಲಿ ಮೇ 24ರಂದು ‘ವಿಕಾಸ ಸಂಭ್ರಮ–2026’

ಬಳ್ಳಾರಿ:15:. ತುಮಕೂರು ಜಿಲ್ಲೆಯ ಗುಬ್ಬಿ ಶ್ರೀ ಚಿದಂಬರ ಆಶ್ರಮದಲ್ಲಿ ಮೇ.24 ರಂದು ವಿಕಾಸ ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ ಬೆಂಗಳೂರು ಆಶ್ರಯದಲ್ಲಿ ವಿಕಾಸ ಸಂಭ್ರಮ - 2026, ಸಾಧಕರಿಗೆ ಗೌರವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ವಿಕಾಸ ಸಮಾನ ಮನಸ್ಕರ  ಮಾಧ್ಯಮ ಮಿತ್ರರ ವೇದಿಕೆ ಬೆಂಗಳೂರು ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮೇಶ ಯಾವಗಲ್ ಅವರು ತಿಳಿಸಿದ್ದಾರೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಹಿರಿಯ ಕ್ರೀಡಾ ಪತ್ರಕರ್ತ ದಿ.ವಿನಾಯಕ ದೇಶಪಾಂಡೆ ಅವರ ಸ್ಮರಣಾರ್ಥ ಅರ್ಹ ಕ್ರೀಡಾ ಪತ್ರಕರ್ತರೊಬ್ಬರಿಗೆ ದಿ.ವಿನಾಯಕ ದೇಶಪಾಂಡೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ನಮ್ಮ ಹಿರಿಯರು ನಮ್ಮ ಹೆಮ್ಮೆ, ಮಾಲಿಕೆಯಲ್ಲಿ ಮಾಧ್ಯಮ ಕ್ಷೇತ್ರದ ಹಿರಿಯರನ್ನು ಹಾಗೂ ಸಾಧಕ ಯುವ ಮಿತ್ರರನ್ನು ಸನ್ಮಾನಿಸಿ ಗೌರವಿಸಲಾಗುವುದು. ಕಾರ್ಯಕ್ರಮಕ್ಕೆ ಹಿಂದಿನ ದಿನ ಆಗಮಿಸುವವರಿಗೆ ಆಶ್ರಮದ ವಿದ್ಯಾರ್ಥಿ ನಿಲಯದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿಯೊಬ್ಬರು ಕಾರ್ಯಕ್ರಮಕ್ಕೆ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮೇಶ ಯಾವಗಲ್ 98440 30946, ರಾಜ್ಯ ಉಪಾಧ್ಯಕ್ಷ ಮಂದಾರ ರಾಜೇಶ್ ಭಟ್ 8088188339, ಜಿಲ್ಲಾ ಮುಖ್ಯ ಸಂಚಾಲಕರು, ವಿಕಾಸ ದಕ್ಷಿಣ ಕನ್ನಡ ಹರೀಶ್ ಕೆ.ಆದೂರು 9483455922  ಅವರನ್ನು ಸಂಪರ್ಕಿಸಬಹುದು.
ಗುಬ್ಬಿಯಲ್ಲಿ ನಡೆಯುವ ಅರ್ಥಪೂರ್ಣ  ಕಾರ್ಯಕ್ರಮದಲ್ಲಿ ನೂತನ ಜಿಲ್ಲಾ ಸಂಚಾಲಕರು ಹಾಗೂ ರಾಜ್ಯ ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಿ ಗೌರವಿಸಲಾಗುವುದು.
ಕಾರ್ಯಕ್ರಮದ ನಂತರ ವಿಕಾಸ ಸಂಘಟನೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್