LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮತದಾರರ ಮಾರ್ಗದರ್ಶನ ಕೈಪಿಡಿ ವಿತರಿಸಿ ತಪ್ಪದೇ ಮತದಾನ ಮಾಡುವಂತೆ ಜಾಗೃತಿ

ಬಳ್ಳಾರಿ,ಏ.27: ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮತದಾನ ಪ್ರಮಾಣ ಹೆಚ್ಚಿಸಲು ಕಂಪ್ಲಿ ಪಟ್ಟಣದಲ್ಲಿ ಹಲವಾರು ಸ್ವೀಪ್ ಕಾರ್ಯಕ್ರಮಗಳನ್ನು ಆಯೋಜಿಲಾಗುತ್ತಿದ್ದು, ಶುಕ್ರವಾರದಂದು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಕಂಪ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಪುರಸಭೆ ವತಿಯಿಂದ ಕಂಪ್ಲಿ ಪಟ್ಟಣದ 4ನೇ ವಾರ್ಡ್ ಚಪ್ಪದರಹಳ್ಳಿಯಲ್ಲಿ ಮತದಾರರ ಮಾರ್ಗದರ್ಶನ ಕೈಪಿಡಿ ವಿತರಿಸಿ ಮತದಾನ ಜಾಗೃತಿ ಮೂಡಿಸಲಾಯಿತು.
ಕಂಪ್ಲಿ ಪುರಸಭೆ ಸಮುದಾಯ ಸಂಘಟನಾಧಿಕಾರಿ ವಸಂತಮ್ಮ ಅವರು ಮಾತನಾಡಿ, ಮೇ 07 ರಂದು ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ನಿಮ್ಮ ಅಕ್ಕ-ಪಕ್ಕದವರಿಗೂ ಮತದಾನ ಮಾಡುವಂತೆ ತಿಳಿಸಬೇಕು ಎಂದರು.

ಮತದಾನ ದಿನದಂದು ಯಾವುದೇ ಕೆಲಸವಿಲ್ಲವೆಂದು ಯಾರೂ ಮತದಾನ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವಂತಿಲ್ಲ. ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಸಮರ್ಥರನ್ನು ಆಯ್ಕೆ ಮಾಡಬೇಕು. ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮನವರಿಕೆ ಮಾಡಿದರು.

ಇದೇ ಸಂದರ್ಭದಲ್ಲಿ ಮತದಾರರ ಪ್ರತಿಜ್ಞೆಯನ್ನು ಬೋಧಿಸಲಾಯಿತು. ಈ ವೇಳೆ ಸಂಪನ್ಮೂಲ ವ್ಯಕ್ತಿಗಳಾದ ರೇಣುಕಾ, ರೋಜಮ್ಮ, ತಾಂತ್ರಿಕ ವಿಭಾಗದ ಸುಧಾಕರ ಸೇರಿದಂತೆ ಮಹಿಳಾ ಗುಂಪುಗಳ ಸದಸ್ಯರು, ಮಹಿಳೆಯರು ಮತ್ತು ಸಾರ್ವಜನಿಕರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್