LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಲೆಬನಾನ್​ಗೆ ಹೋಗುವ ವಿಮಾನಗಳಲ್ಲಿ ವಾಕಿ-ಟಾಕಿ ನಿಷೇಧ!

ಕತಾರ್ ಏರ್‌ವೇಸ್ ಬೈರುತ್​ನಿಂದ ಲೆಬನಾನ್‌ಗೆ ಹೋಗುವ ಎಲ್ಲಾ ವಿಮಾನಗಳಲ್ಲಿ ಪ್ರಯಾಣಿಕರು ಪೇಜರ್‌ಗಳು ಮತ್ತು ವಾಕಿ-ಟಾಕಿಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

ಲೆಬನಾನ್‌ನ ಮೂರು ಪ್ರದೇಶಗಳಲ್ಲಿ ವಾಕಿ-ಟಾಕಿಗಳು, ಹ್ಯಾಂಡ್‌ಹೆಲ್ಡ್ ರೇಡಿಯೋಗಳು ಮತ್ತು ಪೇಜರ್ ಸೆಟ್‌ಗಳಲ್ಲಿ ಸ್ಫೋಟಗಳ ನಂತರ ಏರ್‌ಲೈನ್ಸ್​ ಈ ಕ್ರಮವನ್ನು ತೆಗೆದುಕೊಂಡಿದೆ.

ಈ ಘಟನೆಯಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಮತ್ತು 3000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪೈಕಿ ಸುಮಾರು 450 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.


ಕತಾರ್ ಏರ್‌ವೇಸ್ ಅನ್ನು ನಿರ್ಬಂಧಿಸಲಾಗಿದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದೆ. ಮುಂದಿನ ಸೂಚನೆ ಬರುವವರೆಗೂ ಈ ನಿರ್ಬಂಧ ಜಾರಿಯಲ್ಲಿರುತ್ತದೆ.

ಸೆಪ್ಟೆಂಬರ್ 16 ರಂದು, ಲೆಬನಾನ್‌ನಲ್ಲಿ 3,000 ಕ್ಕೂ ಹೆಚ್ಚು ಪೇಜರ್‌ಗಳು, ವಾಕಿ-ಟಾಕಿಗಳು ಮತ್ತು ಹ್ಯಾಂಡ್‌ಹೆಲ್ಡ್ ರೇಡಿಯೋಗಳು ಇದ್ದಕ್ಕಿದ್ದಂತೆ ಸ್ಫೋಟಗೊಳ್ಳಲು ಪ್ರಾರಂಭಿಸಿದವು. ಈ ಘಟನೆಯಲ್ಲಿ ಅನೇಕ ಹಿಜ್ಬುಲ್ಲಾ ಸಂಘಟನೆ ಸದಸ್ಯರು ಕೊಲ್ಲಲ್ಪಟ್ಟರು ಹಲವರು ಗಾಯಗೊಂಡಿದ್ದರು.


ಬೈರುತ್‌ನಲ್ಲಿರುವ ಇರಾನ್‌ನ ರಾಯಭಾರಿ ಕೂಡ ಗಾಯಗೊಂಡಿದ್ದಾರೆ. ಸಂವಹನಕ್ಕಾಗಿ ಬಳಸಲಾದ ಈ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳಲ್ಲಿ ಸ್ಫೋಟಗಳ ಹಿಂದೆ ಇಸ್ರೇಲಿ ಪಿತೂರಿ ಇದೆ ಎಂದು ಲೆಬನಾನಿನ ಅಧಿಕಾರಿಗಳು ಆರೋಪಿಸಿದ್ದಾರೆ.

ಪೇಜರ್ ಬ್ಯಾಟರಿಯ ಪಕ್ಕದಲ್ಲಿ ಸುಮಾರು 1 ರಿಂದ 2 ಔನ್ಸ್ ಸ್ಫೋಟಕವನ್ನು ಅಳವಡಿಸಲಾಗಿದೆ. ದೂರದಿಂದ ನಿಯಂತ್ರಿಸಲ್ಪಡುತ್ತಿದ್ದ ಈ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಸ್ವಿಚ್ ಕೂಡ ಅಳವಡಿಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್