LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪ್ರತಿಯೊಂದು ಜೀವರಾಶಿಗೂ ನೀರು ಬಹಳ ಅವಶ್ಯ : ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು


ಗದಗ : ಪ್ರತಿಯೊಂದು ಜೀವರಾಶಿಗೂ ನೀರು ಅತ್ಯಂತ ಅವಶ್ಯಕ. ಇಂತಹ ಅಮೂಲ್ಯವಾದ ಜೀವ ಜಲವನ್ನು ರಕ್ಷಿಸಿ ಜಾಗೃತಿ ಮೂಡಿಸುತ್ತಿರುವ ಜಲತಜ್ಞ ಶ್ರೀ ರಾಜೇಂದ್ರಸಿಂಗ್ ಅವರ ಕೊಡುಗೆ ಸಮಾಜಕ್ಕೆ ಅಪಾರವಾಗಿದೆ ಎಂದು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಹೇಳಿದರು.
ಲಿಂಗಾಯತ ಪ್ರಗತಿಶೀಲ ಸಂಘದ ೨೭೯೯ ನೇ ಶಿವಾನುಭವದಲ್ಲಿ ಮಾಡನಾಡಿದ ಶ್ರೀಗಳು, ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ನೀರಿನ ಸದ್ಬಳಕೆಯನ್ನು ಕುರಿತು ಹಾಗೂ ಅಂತರ್ಜಲ ಮಟ್ಟವನ್ನು ಹೆಚ್ಚಿಸುವಲ್ಲಿ ರಾಜೇಂದ್ರಸಿಂಗ್ ಅವರ ಪರಿಶ್ರಮ ಅಪಾರವಾದುದು. ಈ ಕಾರ್ಯಕ್ಕೆ ಅನೇಕ ಗೌರವಗಳು ಅವರನ್ನು ಹುಡುಕಿ ಬಂದಿವೆ. ಅವುಗಳಲ್ಲಿ ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನ ಕೊಡಮಾಡಿದ ಮಹಾ ಮಾನವತಾವಾದಿ ಶ್ರೀ ಬಸವೇಶ್ವರ ಪ್ರಶಸ್ತಿ ಅವರಿಗೆ ಈ ರೀತಿಯ ಇನ್ನಷ್ಟು ಕೆಲಸ ಮಾಡಲು ಶಕ್ತಿಯನ್ನು ನೀಡಿದೆ ಎಂದರು. 
ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್. ಕೆ. ಪಾಟೀಲ ಅವರು, ರಾಜೇಂದ್ರಸಿಂಗ್ ಅವರು ಮನುಕುಲಕ್ಕೆ ಅಪಾರವಾದ ಕಾರ್ಯವನ್ನು ಮಾಡಿದ್ದಾರೆ. ಗುಜರಾತಿನ ಅನೇಕ ಬತ್ತಿ ಹೋದ ನದಿಗಳನ್ನು ಅವರು ತರುಣ ಭಾರತ ಸಂಘದ ಮೂಲಕ ಪುನಶ್ಚೇತನ ಗೊಳಿಸಿದ್ದಾರೆ. ನಮ್ಮ ಗದಗ ಪರಿಸರದ ಈಚಲಹಳ್ಳದ ಪುನಶ್ಚೇತನಗೊಳಿಸಿದ್ದು ಅವರ ಕಾರ್ಯಕ್ಕೆ ಹಿಡಿದ ಕನ್ನಡಿ ಅಂದರು. 
ಅತಿಥಿಗಳಾಗಿ ಭಾಗವಹಿಸಿದ್ದ ಡಿ.ಆರ್. ಪಾಟೀಲ ಅವರು ಮಾತನಾಡಿ, ರಾಜೇಂದ್ರಸಿಂಗ್ ಅವರು ಅನೇಕ ಸವಾಲುಗಳನ್ನು ಎದುರಿಸಿ, ಕುಟುಂಬವನ್ನು ಮರೆತು ಸಮಾಜವೇ ತಮ್ಮ ಕುಟುಂಬವೆಂದು ಬಗೆದು ಸಮಾಜಪರ ಕಾರ್ಯಕ್ಕೆ ತಮ್ಮ ಬದುಕನ್ನು ಸಮರ್ಪಿಸಿದ್ದಾರೆ. ಇಂಥವರೇ ಸಮಾಜದ ನಿಜವಾದ ಆಸ್ತಿ ಎಂದು ಮಾತನಾಡಿದರು. 
ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ’ಮಾನವತಾವಾದಿ ಬಸವೇಶ್ವರ ಪ್ರಶಸ್ತಿ’ ಯನ್ನು ಹೆಸರಾಂತ ಜಲಸಂರಕ್ಷಕರಾದ ರಾಜೇಂದ್ರಸಿಂಗ್ ಅವರಿಗೆ ಪ್ರದಾನ ಮಾಡಲಾಯಿತು. 
ಜೆ.ಕೆ. ಜಮಾದಾರ ಅವರು ರಾಜೇಂದ್ರಸಿಂಗ್ ಅವರ ಬದುಕು ಮತ್ತು ಸಾಧನೆಯನ್ನು ಕುರಿತು ಮಾತನಾಡಿದರು. ಪ್ರಕಾಶ ಲಿಂಬಯ್ಯಸ್ವಾಮಿ ಪ್ರಸ್ತಾವಿಕವಾಗಿ ಪ್ರತಿಷ್ಠಾನ ಮತ್ತು ಕಾರ್ಯಕ್ರಮದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಎಸ್. ಎಸ್. ಪಾಟೀಲ, ಜಿ.ಎಸ್. ಗಡ್ಡದ್ದೇವರಮಠ, ಮೋಹನ ಲಿಂಬಿಕಾಯಿ ಮೊದಲಾದವರು ಉಪಸ್ಥಿತರಿದ್ದರು. ವಚನ ಸಂಗೀತವನ್ನು ಮೃತ್ಯುಂಜಯ ಹಿರೇಮಠ, ಗುರುನಾಥ ಸುತಾರ ನೆರವೇರಿಸಿದರು. ಗ್ರಂಥ ಪಠಣವನ್ನು ಖುಷಿ ಜಗದೀಶ ಹಳ್ಳಿಕೇರಿ ವಚನ ಚಿಂತನವನ್ನು ಖುಷಿ ರಾಮಪ್ಪ ಕಳ್ಳಿಮನಿ ದಾಸೋಹ ಸೇವೆಯನ್ನು ಜಯಶ್ರೀ ಪ್ರಭು ಹಳ್ಳಿಕೇರಿ ಮತ್ತು ಅವರ ಪರಿವಾರದವರು ವಹಿಸಿಕೊಂಡಿದ್ದರು. ಪ್ರಾರಂಭದಲ್ಲಿ ಲಿಂಗಾಯತ ಪ್ರಗತಿಯಲ್ಲಿ ಸಂಘದ ಅಧ್ಯಕ್ಷರಾದ ಡಾ. ಉಮೇಶ ಪುರದ ಅವರು ಸ್ವಾಗತಿಸಿದರು ಕಾರ್ಯಕ್ರಮ ನಿರೂಪಣೆಯನ್ನು ಸಮಿತಿ ಛೇರ್ಮನ್ನರಾದ ಡಾ. ರಮೇಶ ಕಲ್ಲನಗೌಡರ ಮಾಡಿದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್