LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮೀಸಲಾತಿಗಾಗಿ ಹೋರಾಟ ಮಾಡಲು ನಮ್ಮದು ತಕರಾರಿಲ್ಲ: ಸಿಎಂ ಸಿದ್ಧರಾಮಯ್ಯ

ವಿಜಯಪುರ: "ಪಂಚಮಸಾಲಿಯವರು ಮೀಸಲಾತಿಗಾಗಿ ಹೋರಾಟ ಮಾಡಲು ನಮ್ಮದು ತಕರಾರಿಲ್ಲ. ಆದರೆ ಹೋರಾಟ ಸಂವಿಧಾನಿಕವಾಗಿ ಇರಬೇಕು. ಪಂಚಮಸಾಲಿ ಹೋರಾಟಗಾರರಿಗೆ ಬಿಜೆಪಿ ಟೋಪಿ ಹಾಕಿದೆ" ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.


ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "2ಡಿ ಮೀಸಲಾತಿ ಕೊಟ್ಟು ಬಳಿಕ ಹೈಕೋರ್ಟ್​​​ಗೆ ಅಫಿಡವಿಟ್ ಹಾಕಿದವರು ಯಾರು? 2023ರಲ್ಲಿ ಅಫಿಡವಿಟ್​ ಹಾಕಲಾಗಿದೆ. ಆಗ ಇದೇ ಸ್ವಾಮೀಜಿ ಇದ್ದರು. 3ಬಿಯಲ್ಲಿ ಪಂಚಮಸಾಲಿಗಳಿದ್ದಾರೆ. ಹಿಂದುಳಿದ ವರ್ಗದಲ್ಲಿ ಎಷ್ಟು ಜಾತಿ ಇವೆ ಗೊತ್ತಾ? ಅದರಲ್ಲಿ ನಾಲ್ಕು ಕಟೆಗೆರಿ ಇವೆ. 1ಎ ನಲ್ಲಿ ಮೋಸ್ಟ್ ಬ್ಯಾಕ್​ವರ್ಡ್, 2ಎನಲ್ಲಿ ಕೋರ್ ಬ್ಯಾಕ್​ವರ್ಡ್, 3ಎನಲ್ಲಿ ಒಕ್ಲಲಿಗರು, 3ಬಿನಲ್ಲಿ ಲಿಂಗಾಯತರು ಇತರ ಲಿಂಗಾಯತರು ಬರುತ್ತಾರೆ. 2002ರಲ್ಲಿ ಎಸ್​.ಎಂ. ಕೃಷ್ಣ ಸಿಎಂ ಇದ್ದಾಗ ಇದೆಲ್ಲ ಆಗಿದೆ" ಎಂದು ತಿಳಿಸಿದರು.


"1992ರಲ್ಲಿ ಮೊಯ್ಲಿ ಸಿಎಂ ಇದ್ದಾಗ ಮುಸ್ಲಿಂರಿಗೆ 2ಬಿ ಮಾಡಿದ್ದಾರೆ. ಬಳಿಕ ಬಿಜೆಪಿಯವರು ಮುಸ್ಲಿಂನವರಿಗೆ ಕೊಟ್ಟಿದ್ದನ್ನು ರದ್ದು ಮಾಡಿ 2ಸಿ, 2ಡಿ ಮಾಡಿ ಅದರಲ್ಲಿನ ಶೇ.4ರ ಮೀಸಲಾತಿ ತೆಗೆದು ಇವರಿಗೆ ಕೊಟ್ಟಿದಾರೆ. ಆಗ ಯಾಕೆ ಇವರು ಪ್ರತಿಭಟನೆ ಮಾಡಲಿಲ್ಲ. ಈಗ ಅದೇ ಸರ್ಕಾರದವರು ಇವರಿಗೆ ಸಪೋರ್ಟ್ ಮಾಡುತ್ತಿದ್ದಾರೆ. ಮುಸ್ಲಿಂ ಮೀಸಲಾತಿ ಕಸಿದುಕೊಂಡಿದ್ದನ್ನು ಪ್ರಶ್ನಿಸಿ ರಸೂಲ್ ಎನ್ನುವವರು ಸುಪ್ರೀಂಕೋರ್ಟ್​ಗೆ ಹೋಗಿದ್ದರು. ಆಗ ಅಲ್ಲಿ ಇವರ ಪರ ವಕೀಲರು ನಾವು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಎಂದು ಹೇಳಿದ್ದರು. ಬಿಜೆಪಿಯವರು ಈಗ ಯಾಕೆ ಬೆಂಬಲ ಮಾಡುತ್ತಿದ್ದಾರೆ?" ಎಂದು ಪ್ರಶ್ನಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್