LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಿಎಂ ತವರು ಜಿಲ್ಲೆಯಲ್ಲೇ ಅಸ್ಪೃಶ್ಯತೆ ಆಚರಣೆ! ಏನಿದು ಘಟನೆ?

ಮೈಸೂರು (ಜೂ.23): ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಅಸ್ಪೃಶ್ಯತೆ ಆಚರಣೆ ಇನ್ನೂ ಜೀವಂತವಿದೆ ಎಂಬುದಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ.

ದಲಿತ ಯುವಕನಿಗೆ ದೇವಸ್ಥಾನ ಪ್ರವೇಶಿಸಲು ಅರ್ಚಕರು, ಗ್ರಾಮಸ್ಥರು ಅಡ್ಡಿಪಡಿಸಿದ ಘಟನೆ ಮೈಸೂರು ಜಿಲ್ಲೆಯ ಕಿರಾಳು ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ಯುವಕ ದೂರು ನೀಡಿದ ಹಿನ್ನೆಲೆ ಅನಿಷ್ಟ ಪದ್ಧತಿಗೆ ಜಿಲ್ಲಾಡಳಿತ ಬಿಸಿ ಮುಟ್ಟಿಸಿದೆ, ಅಲ್ಲದೇ ಇಂತಹ ಅಸ್ಪೃಶ್ಯತೆ ಆಚರಣೆಗಳನ್ನ ಸಹಿಸುವುದಿಲ್ಲ ಎಂದು ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ.

ಹೌದು, ಕಿರಾಳು ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ನವೀನ್ ಎಂಬ ಯುವಕನಿಗೆ ಗ್ರಾಮದ ಶಂಭುಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪ್ರವೇಶಿಸಲು ಅರ್ಚಕರು, ಗ್ರಾಮಸ್ಥರು ಅಡ್ಡಿಪಡಿಸಿದ್ದಾರೆ. ಗ್ರಾಮದಲ್ಲಿನ ಅಸ್ಪೃಶ್ಯತೆ ಬಗ್ಗೆ ತಹಸೀಲ್ದಾರ್‌ರಿಗೆ ದೂರು ನೀಡಿದ್ದ ಯುವಕ ನವೀನ್. ದೂರು ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು ಜಿಲ್ಲಾಧಿಕಾರಿ ಡಾ ಕೆವಿ ರಾಜೇಂದ್ರ ನಿರ್ದೇಶನದ ಮೇರೆಗೆ ತಹಸೀಲ್ದಾರ್ ಮಹೇಶ್ ಕುಮಾರ ನೇತೃತ್ವದಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಮುಖಂಡರು, ಅರ್ಚಕರೊಂದಿಗೆ ಚರ್ಚಿಸಿದ್ದಾರೆ.

ದೇವಸ್ಥಾನದ ಆವರಣದಲ್ಲಿ ಸಭೆ ಕರೆದು ಅಸ್ಪೃಶ್ಯತೆ ಆಚರಿಸದಂತೆ ಜಾಗೃತಿ ಮೂಡಿಸಿದ್ದಾರೆ. ಒಂದು ಅಸ್ಪೃಶ್ಯತೆ ಆಚರಿಸಿದರೆ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ. ಮೌಢ್ಯಾಚರಣೆ, ಅನಿಷ್ಠ ಪದ್ದತಿಗಳಿಂದ ಕಾನೂನು ಮೀರುವಂತಿಲ್ಲ ಎಂದು ಕಿರಾಳು ಗ್ರಾಮಸ್ಥರಿಗೆ ಕಾನೂನು ಪಾಠ ಮಾಡಿದ್ದಾರೆ. ಅಧಿಕಾರಿಗಳ ಎಚ್ಚರಿಕೆ ಬಳಿಕ ದಲಿತ ಯುವಕ ನವೀನ್‌ಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್