LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಮಿತ್ ಶಾ ಭೇಟಿಯಾಗಿದ್ದೇಕೆ ಹೆಚ್​ಡಿ ದೇವೇಗೌಡ?

ಬೆಂಗಳೂರು, ಆಗಸ್ಟ್ 8: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅವರ ಕುಟುಂಬದ ರಕ್ಷಣೆಗೆ ಅವರು (ದೇವೇಗೌಡರು) ಹೋಗಲೇ ಬೇಕಲ್ಲವಾ? ಅಷ್ಟೇ ಅಲ್ಲದೆ, ನಮ್ಮ ವಿರುದ್ಧ ಪಟ್ಟಿ ಕೊಡುವುದಕ್ಕೆ ಹೋಗಿರಬಹುದು ಎಂದರು.

ನನ್ನನ್ನು ಹಾಗೂ ಸಿಎಂ ಸಿದ್ದರಾಮಯ್ಯರನ್ನು ಒಳಗೆ ಹಾಕಬೇಕೆಂದು ಏನೋ ಮಾಡುತ್ತಿದ್ದಾರೆ. ನಾನು ಇದಕ್ಕೆ ರೆಡಿ ಇದ್ದೇನೆ ಎಂದ ಡಿಕೆ ಶಿವಕುಮಾರ್, ಬಿಜೆಪಿ ಭ್ರಷ್ಟಾಚಾರದ ದಾಖಲೆಗಳನ್ನ ಬಿಡುಗಡೆ ಮಾಡುತ್ತೇವೆ. ದಾಖಲೆ ಬಿಡುಗಡೆಗೆ ದಿನ, ಘಳಿಗೆ ಕೂಡಿ ಬರಲಿ. ಅಕ್ರಮ ಬಗ್ಗೆ ಚರ್ಚೆ ಮಾಡಲು ಬಿಜೆಪಿಯವರು ರೆಡಿಯಾಗಿಲ್ಲ ಎಂದರು.

ಅವರ (ಕುಮಾರಸ್ವಾಮಿ) ಸಹೋದರನಿಗೆ ಆಸ್ತಿ ಹೇಗೆ ಬಂತು ಎಂದು ಹೇಳಿದ್ದೇನೆ. ಅದನ್ನು ಬಿಚ್ಚಿಡಬೇಕಲ್ಲವಾ? ನಾನು ದಲಿತರಿಗೆ ಅನ್ಯಾಯ ಮಾಡಿ ಆಸ್ತಿ ಮಾಡಿದೆ ಎಂದು ಆರೋಪ ಮಾಡುತ್ತಾರೆ. ಆ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಲಿ. ಬ್ಲಾಕ್ ಅಂಡ್ ವೈಟ್ ಟೀವಿ ಮಾಡಿಕೊಂಡಿದ್ದೆನಂತೆ. ಅದನ್ನು ಅಲ್ಲಿ ಬಂದು ವಿಚಾರಿಸಲಿ? ನಾವೆಲ್ಲಾ ಹುರುಳಿ, ಕಡಲೇಕಾಯಿ, ರಾಗಿಯನ್ನೇ ತಿಂದವರು. ಅದನ್ನು ಬೆಳೆದುಕೊಂಡು ಬಂದಿದ್ದೇವೆ. ಈಗಲೂ ಬೆಳೆಯುತ್ತಿದ್ದೇವೆ. ನಮ್ಮ ಆಸ್ತಿ ಎಷ್ಟಿದೆ ಅನ್ನೋದನ್ನ ಬಂದು ಕೇಳಲಿ ಎಂದು ಡಿಕೆ ಶಿವಕುಮಾರ್ ಸವಾಲು ಹಾಕಿದರು.

ಸಿಎಂ, ಡಿಸಿಎಂರನ್ನು ಚಕ್ರವ್ಯೂಹದಲ್ಲಿ ಸಿಲುಕಿಸುತ್ತೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನೋಡಿ ಪಾ, ಅದೇನೋ ಹೇಳ್ತಾರಲ್ಲ. ದಿನಾ ಸಯೋರಿಗೆ ಅಳುವವರು ಯಾರು ಅಂತ. ಅದೇ ರೀತಿ, ಇವರದೆಲ್ಲಾ ಗೋಳು ಇದ್ದಿದ್ದೇ. ಇವರ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಮುಂದಕ್ಕೂ ಹೋರಾಟ ಮಾಡುತ್ತೇವೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ