LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗ್ರಂಥಾಲಯ ಸಂಘದ ಚಟುವಟಿಕೆ ವಿಸ್ತರಣೆಯಲ್ಲಿ ಒಗ್ಗೂಡಿ ಕಾರ್ಯನಿರ್ವಹಿಸಿ

ಹಸಿರು ಕ್ರಾಂತಿ ವರದಿ ಬೆಳಗಾವಿ

ಗ್ರಂಥಾಲಯ ಸಂಘದ ಚಟುವಟಿಕೆಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ರಾಜ್ಯಾಧ್ಯಕ್ಷ ಡಾ.ಎಸ್.ಎಲ್.ಕಾಡದೇವರಮಠ ಹೇಳಿದರು.

ನಗರದ ಜಿಲ್ಲಾ ಗ್ರಂಥಾಲಯ ಆವರಣದಲ್ಲಿ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘ (ರಿ) ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಓದುವ ಹವ್ಯಾಸ ಹಾಗೂ ಆಸಕ್ತಿಗಳನ್ನು ಹೆಚ್ಚಿಸುವಂತ ಕಾರ್ಯ ಯೋಜನೆಗಳನ್ನು ಹಾಕಿಕೊಂಡು ಓದಿಸುವ ಪ್ರವೃತ್ತಿ ಹೆಚ್ಚಾಗಬೇಕು ಎಂದು ಸಲಹೆ ನೀಡಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಬೆಂಗಳೂರಿನ ಎಲ್ಐಎಸ್ ಅಕಾಡೆಮಿಯ ಅಧ್ಯಕ್ಷ ಪ್ರೊ.ಪಿ.ವಿ.ಕೊಣ್ಣೂರ ಮಾತನಾಡಿ, ಗ್ರಂಥಾಲಯ ಚಳುವಳಿಯ ಮಹತ್ವ ಮತ್ತು ಗ್ರಂಥಾಲಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರ ಜವಾಬ್ದಾರಿಯ ಬಗ್ಗೆ ವಿವರಿಸಿದರು.

ಕಲಾ ಉಪಾಧ್ಯಕ್ಷ ಹಾಗೂ ಬೆಂಗಳೂರಿನ ಐಆರ್‌ಸಿ ಟಿಸಿಎಸ್‌ನ ಪ್ರಾದೇಶಿಕ ಮುಖ್ಯಸ್ಥ ಡಾ.ನಾಗಪ್ಪ ಬಕ್ಕಣ್ಣನವರ ನೂತನ ಪದಾಧಿಕಾರಿಗಳಿಗೆ ಸಂಘದ ನಿಯಮಾವಳಿ ಮತ್ತು ಉದ್ದೇಶಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುವುದಾಗಿ ಪ್ರಮಾಣ ವಚನ ಬೋಧಿಸಿದರು.

ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಬೆಳಗಾವಿ ಜಿಲ್ಲಾ ಘಟಕದ ಸಲಹೆಗಾರ ಡಾ.ಕಿರಣ್ ಪಿ.ಸವನೂರ ಹಾಗೂ ಬೆಳಗಾವಿ ಜಿಲ್ಲಾ ಗ್ರಂಥಾಲಯ ಅಧಿಕಾರಿ ರಾಮಯ್ಯ ಉಪಸ್ಥಿತರಿದ್ದರು.

ಡಾ.ರಾಜು ಗಡದ ಮತ್ತು ಡಾ.ಅಶ್ವಿನಿ ಲಟ್ಟೆ ಕಾರ್ಯಕ್ರಮ ನಿರೂಪಿಸಿದರು. ಡಾ.ಕಿರಣ ಮಾಳವಡೆ ವಂದಿಸಿದರು. ಜಿಲ್ಲೆಯಾದ್ಯಂತ ಗ್ರಂಥಾಲಯ ವೃತ್ತಿಪರರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮುಕ್ತ ಚರ್ಚೆ, ಅಮೂಲ್ಯ ಸಲಹೆ ನೀಡಿದ ಗ್ರಂಥಾಲಯ ವೃತ್ತಿಪರರು

ಈ ಸಂದರ್ಭದಲ್ಲಿ ಸದಸ್ಯರು ಸಂಘದ ಮುಂದಿನ ಕಾರ್ಯಯೋಜನೆ, ಸದಸ್ಯತ್ವ ವೃದ್ಧಿ, ಗ್ರಂಥಾಲಯ ವೃತ್ತಿಪರರ ಕೌಶಲ್ಯಾಭಿವೃದ್ಧಿ, ಸರ್ಕಾರ ಮಟ್ಟದ ನೇಮಕಾತಿ, ತರಬೇತಿ ಕಾರ್ಯಾಗಾರಗಳು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನಗಳ ಆಯೋಜನೆ, ಡಿಜಿಟಲ್ ಗ್ರಂಥಾಲಯ ಸೇವೆಗಳ ವಿಸ್ತರಣೆ ಹಾಗೂ ಜಿಲ್ಲೆಯ ಎಲ್ಲ ಗ್ರಂಥಾಲಯಗಳ ನಡುವೆ ಸಮನ್ವಯ ಮತ್ತು ಸಹಕಾರ ಬಲಪಡಿಸುವ ಕುರಿತು ನಡೆದ ಚರ್ಚೆಗೆ ಪದಾಧಿಕಾರಿಗಳು ತಮ್ಮ ಅಮೂಲ್ಯ ಸಲಹೆಗಳನ್ನು ನೀಡಿದರು.

ಅಧಿಕಾರ ಸ್ವೀಕರಿಸಿದ ಪದಾಧಿಕಾರಿಗಳು

ಸಮಾರಂಭದಲ್ಲಿ ಬೆಳಗಾವಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಡಾ.ಭರತ್ ಬಿ.ಅಲಸಂಡಿ, ಉಪಾಧ್ಯಕ್ಷರಾದ ರವಿ ಡಿ.ಶಿವಣಾಯ್ಕರ ಮತ್ತು ಡಾ.ರಮೇಶ ಬಿ.ಕುರಿ, ಪ್ರಧಾನ ಕಾರ್ಯದರ್ಶಿ ಡಾ.ಕಿರಣ ಮಾಳವಡೆ, ಸಂಘಟನಾ ಕಾರ್ಯದರ್ಶಿ ಪ್ರಕಾಶ ಇಚಲಕರಂಜಿ ಹಾಗೂ ಖಜಾಂಚಿ ಡಾ.ಸುಮನ್ ಮುದ್ದಾಪುರ ಅಧಿಕಾರ ಸ್ವೀಕರಿಸಿದರು. ಇದರೊಂದಿಗೆ ರಾಮಯ್ಯ, ಡಾ.ವೇಣುಗೋಪಾಲ ಹಜ್ಜಿ, ಡಾ.ಅಶ್ವಿನಿ ಲಟ್ಟೆ, ನಳಿನಿ ಅಂಬಲಿ, ಡಾ.ತಾಯಪ್ಪ ಅದಿನ್, ರಮೇಶ ಶಿರೋಟೆ, ಸುಪ್ರೀತ್ ಸಾಕತ್, ಡಾ.ರಾಜು ಗದಗ ಮತ್ತು ಮಹೇಶ ದೊಡ್ಡಲಕ್ಕಣ್ಣವರ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದರು.

ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘ ನೋಂದಣಿಯಾದ ರಾಜ್ಯಮಟ್ಟದ ಸಂಘಟನೆಯಾಗಿದ್ದು, ಗ್ರಂಥಾಲಯಗಳು, ಗ್ರಂಥಪಾಲಕರ ಮತ್ತು ಗ್ರಂಥಾಲಯ ಮಾಹಿತಿ ವಿಜ್ಞಾನದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ.

-ಡಾ.ಎಸ್.ಎಲ್.ಕಾಡದೇವರಮಠ, ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘ ಬೆಂಗಳೂರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ