LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಧಾರವಾಡ ರಂಗಾಯಣಕ್ಕೆ ಝಕೀರ ನದಾಫ ನೂತನ ನಿರ್ದೇಶಕ

ಧಾರವಾಡ ,08 :  ಧಾರವಾಡ ರಂಗಾಯಣದ ನೂತನ ನಿರ್ದೇಶಕರಾಗಿ ಝಕೀರ ನದಾಫ ನೇಮಕಗೊಂಡಿದ್ದು ಧಾರವಾಡ ರಂಗಾಯಣದ ಸುವರ್ಣ ಸಾಂಸ್ಕøತಿಕ ಸಮುಚ್ಛಯ ಸಭಾಭವನಲ್ಲಿ ಪತ್ರಿಕಾಗೋಷ್ಠಿ ಜರುಗಿಸಿ, ಮಾತನಾಡಿದರು.
ರಂಗಾಯಣದ ನಾಟಕ, ಕಲಾ ಕಾರ್ಯಕ್ರಮಗಳನ್ನು ಮತ್ತಷ್ಟು ಪ್ರಬಲವಾಗಿ ನಡೆಸಿ ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಮೂಲಕ ಧಾರವಾಡದ ಸಾಂಸ್ಕøತಿಕ ಚಟುವಟಿಕೆಗಳನ್ನು ಹೆಚ್ಚಿಸಲಾಗುವುದು ಎಂದು ಅವರು ಹೇಳಿದರು. 
ಧಾರವಾಡದಲ್ಲಿ ಜಿಲ್ಲಾ ಮಟ್ಟದ ಕಾಲೇಜು ರಂಗೋತ್ಸವವನ್ನು ನಡೆಸಬೇಕೆಂದು ಕೊಂಡಿದ್ದೇವೆ. ಅದೇ ರೀತಿ ರಂಗಧ್ವನಿಯನ್ನು ಮತ್ತೆ ಪ್ರಾರಂಭಿಸುವ ಉದ್ದೇಶವನ್ನು ಸಹ ಹಾಕಿಕೊಂಡಿದ್ದೇವೆ ಎಂದು ಅವರು ತಿಳಿಸಿದರು. 
ಜಿಲ್ಲೆಯಲ್ಲಿ ರಂಗಭೂಮಿಯಿಂದ ಬಹುಭಾಷಾ ನಾಟಕೋತ್ಸವಗಳನ್ನು ಕೂಡ ಆಯೋಜಿಸುವ ಯೋಜನೆಗಳಿವೆ. ಜನರು ಹೇಗೆ ಸಿನಿಮಾಗಳಿಗೆ ಪ್ರೋತ್ಸಾಹ, ಬೆಂಬಲಗಳನ್ನು ಸೂಚಿಸುತ್ತಾರೆಯೋ ಅದೇ ರೀತಿ ನಾಟಕ ಮತ್ತು ರಂಗಭೂಮಿಗೆ ಜನರು ಪ್ರೋತ್ಸಾಹವನ್ನು ನೀಡಿದರೆ, ರಂಗಭೂಮಿಯನ್ನು ಮತ್ತಷ್ಟು ಉತ್ತುಂಗ ಮಟ್ಟಕ್ಕೆ ತೆಗೆದುಕೊಂಡು ಹೋಗುವುದಕ್ಕೆ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ರಂಗಾಯಣದ ಆಡಳಿತಾಧಿಕಾರಿ ಶಶಿಕಲಾ ಹುಡೇದ ಅವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್